PM Modi Security Breach: ಸುಪ್ರೀಂ ಅಂಗಳ ತಲುಪಿದ ಭದ್ರತಾ ಲೋಪ, ಎಲ್ಲರ ಚಿತ್ತ ತೀರ್ಮಾನದತ್ತ!

PM Modi Security Breach: ಸುಪ್ರೀಂ ಅಂಗಳ ತಲುಪಿದ ಭದ್ರತಾ ಲೋಪ, ಎಲ್ಲರ ಚಿತ್ತ ತೀರ್ಮಾನದತ್ತ!

Published : Jan 07, 2022, 02:18 PM ISTUpdated : Jan 07, 2022, 02:35 PM IST

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದೆ.  

ನವದೆಹಲಿ (ಜ. 07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

ತಮ್ಮ ಪಂಜಾಬ್‌ ಭೇಟಿ ವೇಳೆ ಭಾರಿ ಭದ್ರತಾ ಲೋಪ ಉಂಟಾದ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ. ಇದೇ ವೇಳೆ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಪ್ರಧಾನಿ ಜತೆ ಮಾತನಾಡಿ, ಘಟನೆಯ ಕುರಿತು ತೀವ್ರ ಕಳವಳ ತೋಡಿಕೊಂಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಭಾರಿ ಭದ್ರತಾ ಲೋಪ ಉಂಟಾದ ಘಟನೆ ಕುರಿತು ವಿಸ್ತೃತ ತನಿಖೆ ನಡೆಸಲು ಪಂಜಾಬ್‌ ಸರ್ಕಾರ ಇಬ್ಬರು ಸದಸ್ಯರನ್ನು ಒಳಗೊಂಡ ಅತ್ಯುನ್ನತ ಸಮಿತಿಯೊಂದನ್ನು ರಚನೆ ಮಾಡಿದೆ. ಮೂರು ದಿನದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದೇ ವೇಳೆ, ಭದ್ರತಾ ಲೋಪ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಈ ಸಂಬಂಧ ಹಿರಿಯ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ. ನ್ಯಾಯಾಲಯದ ತೀರ್ಪು ಪಂಜಾಬ್ ಸರ್ಕಾರಕ್ಕೆ ಯಾವ ರೀತಿ ಬಿಸಿ ಮುಟ್ಟಿಸುತ್ತದೆ..? ನೋಡಬೇಕಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more