PM Modi Security Breach: ಸುಪ್ರೀಂ ಅಂಗಳ ತಲುಪಿದ ಭದ್ರತಾ ಲೋಪ, ಎಲ್ಲರ ಚಿತ್ತ ತೀರ್ಮಾನದತ್ತ!

PM Modi Security Breach: ಸುಪ್ರೀಂ ಅಂಗಳ ತಲುಪಿದ ಭದ್ರತಾ ಲೋಪ, ಎಲ್ಲರ ಚಿತ್ತ ತೀರ್ಮಾನದತ್ತ!

Suvarna News   | Asianet News
Published : Jan 07, 2022, 02:18 PM ISTUpdated : Jan 07, 2022, 02:35 PM IST

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದೆ.  

ನವದೆಹಲಿ (ಜ. 07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

ತಮ್ಮ ಪಂಜಾಬ್‌ ಭೇಟಿ ವೇಳೆ ಭಾರಿ ಭದ್ರತಾ ಲೋಪ ಉಂಟಾದ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ. ಇದೇ ವೇಳೆ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಪ್ರಧಾನಿ ಜತೆ ಮಾತನಾಡಿ, ಘಟನೆಯ ಕುರಿತು ತೀವ್ರ ಕಳವಳ ತೋಡಿಕೊಂಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಭಾರಿ ಭದ್ರತಾ ಲೋಪ ಉಂಟಾದ ಘಟನೆ ಕುರಿತು ವಿಸ್ತೃತ ತನಿಖೆ ನಡೆಸಲು ಪಂಜಾಬ್‌ ಸರ್ಕಾರ ಇಬ್ಬರು ಸದಸ್ಯರನ್ನು ಒಳಗೊಂಡ ಅತ್ಯುನ್ನತ ಸಮಿತಿಯೊಂದನ್ನು ರಚನೆ ಮಾಡಿದೆ. ಮೂರು ದಿನದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದೇ ವೇಳೆ, ಭದ್ರತಾ ಲೋಪ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಈ ಸಂಬಂಧ ಹಿರಿಯ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ. ನ್ಯಾಯಾಲಯದ ತೀರ್ಪು ಪಂಜಾಬ್ ಸರ್ಕಾರಕ್ಕೆ ಯಾವ ರೀತಿ ಬಿಸಿ ಮುಟ್ಟಿಸುತ್ತದೆ..? ನೋಡಬೇಕಿದೆ. 
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more