Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Published : Dec 13, 2021, 10:33 AM ISTUpdated : Dec 13, 2021, 10:39 AM IST

*ಪ್ರಧಾನಿ ಮೋದಿ ಕನಸಿನ ಕಾಶಿ ಕಾರಿಡಾರ್‌
*ಎರಡೂವರೆ ವರ್ಷಗಳಲ್ಲಿ ಕಾಮಗಾರಿ ಪೂರ್ಣ
*339 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ

ವಾರಣಾಸಿ(ಡಿ. 13): ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದೆ. ಇಂದು(ಡಿ.13) ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಧಾಮ ಕಾರಿಡಾರ್(Vishwanath Dham project) ಯೋಜನೆಯನ್ನು ಮಧ್ಯಾಹ್ನ 2 ಗಂಟೆಗೆ ಉದ್ಘಾಟಿಸಲಿದ್ದಾರೆ. 

Kashi Vishwanath Dham ಪ್ರಧಾನಿ ಮೋದಿ ಕನಸಿನ ಯೋಜನೆ ಪೂರ್ಣ, ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಡಿ.13ಕ್ಕೆ ಉದ್ಘಾಟನೆ!

339 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಾಗಿದೆ. ಐತಿಹಾಸಿಕ ದೇಗುಲ ಹಾಗೂ ಅದರ ಸುತ್ತಲಿನ ಸಂಕೀರ್ಣದಲ್ಲಿ ಈ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ವಿಶೇಷ ಅಂದರೆ ದೇವಾಲಯದ ಪರಂಪರೆ ಹಾಗೂ ಸಂಸ್ಕೃತಿಗೆ (Art and Culture) ಯಾವುದೇ ಧಕ್ಕೆ ಬರದ ರೀತಿಯಲ್ಲಿ ಕಾಶಿ ವಿಶ್ವನಾಥ ದೇಗುಲದ ಗತವೈಭವವನ್ನು ಪುನರ್ ನಿರ್ಮಿಸಲಾಗಿದೆ. 5,000 ಹೆಕ್ಟೇರ್ ಪ್ರದೇಶದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ತಲೆ ಎತ್ತಿದೆ. ಭೂಸ್ವಾದೀನ ಪಡಿಸಿದ ಬಳಿಕ 300ಕ್ಕೂ ಹೆಚ್ಚು ಕಟ್ಟಡಗಳನ್ನು ಕೆಡವಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more