Statue Of Equality: ಫೆ.5ರಂದು ಮೋದಿಯಿಂದ ರಾಮಾನುಜಂ ಬೃಹತ್ ಪ್ರತಿಮೆ ಅನಾವರಣ

Statue Of Equality: ಫೆ.5ರಂದು ಮೋದಿಯಿಂದ ರಾಮಾನುಜಂ ಬೃಹತ್ ಪ್ರತಿಮೆ ಅನಾವರಣ

Published : Feb 03, 2022, 02:30 PM IST

ಜಗತ್ತಿಗೆ ಸಮಾನತೆಯ ಪಾಠ ಹೇಳಿದ ರಾಮಾನುಜಾಚಾರ್ಯರ 1000ನೇ ಜಯಂತಿಯ ಅಂಗವಾಗಿ ಶಂಶಾ‌ಬಾದ್‌ನಲ್ಲಿ ಅವರ 216 ಅಡಿ ಎತ್ತರದ ಪ್ರತಿಮೆಯನ್ನು ಫೆ.5ರಂದು ಪ್ರಧಾನಿ ಮೋದಿ ಅನಾವರಣ ಮಾಡುತ್ತಿದ್ದಾರೆ. 

11ನೇ ಶತಮಾನದ ಸಂತ, ವಿಶಿಷ್ಠಾದ್ವೈತ ಪ್ರತಿಪಾದಕ, ಹಿಂದೂ ವೇದಾಂತ ತತ್ವಜ್ಞಾನಿ ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಫೆ.5ರಂದು ಶಂಶಾಬಾದ್‌ನಲ್ಲಿ ಲೋಕಾರ್ಪಣೆ ಮಾಡುತ್ತಿದ್ದಾರೆ. 
ಹೈದರಾಬಾದ್‌ನ ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್‌ನಲ್ಲಿ ಶ್ರೀ ತ್ರಿದಂಡಿ ಚಿನ್ನ ಜೀಯರ್ ಸ್ವಾಮಿ ಆಶ್ರಮದಲ್ಲಿ ರಾಮಾನುಜಂ ಅವರ ಗೌರವಾರ್ಥವಾಗಿ ದೇವಾಲಯ ಹಾಗೂ ಪ್ರತಿಮೆಯನ್ನು ನಿರ್ಮಿಸಲಾಗಿದೆ. ರಾಮಾನುಜಂ ಅವರ 1000 ವರ್ಷದ ಜಯಂತಿ ಹಿನ್ನೆಲೆಯಲ್ಲಿ ಪ್ರತಿಮೆ ಅನಾವರಣ ಕಾರ್ಯ ನಡೆಯುತ್ತಿದೆ. ಇದು ಭಾರತದ ಎರಡನೇ ಅತಿ ಎತ್ತರದ ಪ್ರತಿಮೆಯಾಗಿದ್ದು, ಇದಕ್ಕೆ ಸಮತಾ ಪ್ರತಿಮೆ ಎಂದು ಹೆಸರಿಡಲಾಗಿದೆ. 

Pak-China Remark: ರಾಹುಲ್ ಗಾಂಧಿ ಹೇಳಿಕೆಗೆ ನಮ್ಮ ಬೆಂಬಲವಿಲ್ಲ ಎಂದ ಅಮೆರಿಕ!

ಸಾವಿರ ವರ್ಷಗಳ ಹಿಂದೆಯೇ ವೈಷ್ಣವ ಸಂತ ರಾಮಾನುಜಾಚಾರ್ಯರು ಅಸ್ಪರ್ಶತೆ ತೊಡೆದು ಹಾಕಿದವರು. ಹಿಂದುಳಿದ ವರ್ಗದವರಿಗೆ ದೇವಾಲಯ ಪ್ರವೇಶ ಮಾಡಿಸಿ, ಅವರನ್ನು ಉತ್ತಮ ಕುಲದವರೆಂದು ಕರೆದವರು. ಜಾತಿ, ಮತ, ಲಿಂಗ ಭೇದವನ್ನು ಖಂಡಿಸಿದವರು. ಸಮಾನತೆಯ ಹರಿಕಾರರಾಗಿದ್ದ ಅವರ ಈ ಮೂರ್ತಿಯ ವಿಶೇಷಗಳೇನು ಎಂಬ ಕುರಿತ ವಿವರಣೆ ಇಲ್ಲಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more