News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

Published : Jan 12, 2024, 11:26 PM IST

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಸಿಕ್‌ನ ಕಾಲಾರಾಮ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಮಾತ್ರವಲ್ಲದೇ ದೇವಸ್ಥಾನದ ಶುಚಿತ್ವ ಕಾರ್ಯವನ್ನೂ ಮಾಡಿ, ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವ್ರತವನ್ನೂ ಆರಂಭಿಸಿದರು. 

ಬೆಂಗಳೂರು (ಜ.12): ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ನಾಸಿಕ್‌ ಮತ್ತು ನವೀ ಮುಂಬೈನಲ್ಲಿ ಮೋದಿ ಮೆಗಾ ರೋಡ್‌ಶೋ ನಡೆಸಿದರು. ಈ ವೇಳೆ ನಾಸಿಕ್‌ನ ಕಾಲಾರಾಮ್‌ ಮಂದಿರಲ್ಲಿ ಮೋದಿ ಶ್ರಮಾದಾನ ಮತ್ತು ಪೂಜೆ ನಡೆಸಿದರು.

ನಾಸಿಕ್‌ನ ಕಾಲಾರಾಮ್‌ ದೇಗುಲದಲ್ಲಿಯೇ ಮೋದಿ ವ್ರತ ಆರಂಭಿಸಿದ್ದಾರೆ. ರಾಮಾಯಣಕ್ಕೂ ಈ ಕಾಲಾರಾಮ್‌ ದೇವಸ್ಥಾನಕ್ಕೂ ನಂಟಿದೆ. ಐದು ಆಲದ ಮರಗಳು ಒಟ್ಟಿಗೆ ಇರುವ ಇದೇ ಪ್ರದೇಶದಿಂದಲೇ ಸೀತಾ ಮಾತೆಯ ಅಪಹರಣವಾಗಿತ್ತು ಎನ್ನುವುದು ಪ್ರತೀತಿ.

ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ತಾಯಿ ಹೀರಾಬೆನ್‌ ಸಂದೇಶ ನೆನಪಿಸಿಕೊಂಡು ಭಾವುಕರಾದ ಪ್ರಧಾನಿ ಮೋದಿ!

1790 ರಲ್ಲಿ ಪೇಶ್ವೆ ಸರ್ದಾರ್ ಓಧೇಕರ್ ಈ ದೇವಸ್ಥಾನವನ್ನು ಕಟ್ಟಿದ್ದರು. ವಿಗ್ರಹ ಕಪ್ಪು ಬಣ್ಣದ್ದು.. ಹೀಗಾಗಿ ಕಾಲಾರಾಮ್ ಮಂದಿರ ಎಂದು ಕರೆಸಿಕೊಂಡಿದೆ. ಇಲ್ಲಿ ರಾಮನ ಜತೆಗೆ ಸೀತಾಮಾತೆ, ಲಕ್ಷ್ಮಣನ ವಿಗ್ರಹಗಳೂ ಇವೆ. ಇಡೀ ದೇಗುಲವನ್ನ ಕಪ್ಪು ಕಲ್ಲುಗಳಿಂದಲೇ ನಿರ್ಮಿಸಲಾಗಿದೆ. ಮಂದಿರದ ಶಿಖರವು 32 ಟನ್ ಚಿನ್ನದಿಂದ ಮಾಡಲಾಗಿದೆ ಎನ್ನಲಾಗಿದೆ. ಗೋಧಾವರಿಯಲ್ಲಿ ವಿಗ್ರಹ ಇದೆ ಎಂದು ರಾಜನಿಗೆ ಕನಸು ಬಿದ್ದಿತ್ತು. ಬಳಿಕ ನದಿಯಲ್ಲಿ ಹುಡುಕಿದಾಗ ಸಿಕ್ಕ ವಿಗ್ರಹ ಹೊರ ತೆಗೆದು ದೇವಸ್ಥಾನವನ್ನು ಕಟ್ಟಿದ್ದರು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more