News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

Published : Jan 12, 2024, 11:26 PM IST

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಸಿಕ್‌ನ ಕಾಲಾರಾಮ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಮಾತ್ರವಲ್ಲದೇ ದೇವಸ್ಥಾನದ ಶುಚಿತ್ವ ಕಾರ್ಯವನ್ನೂ ಮಾಡಿ, ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವ್ರತವನ್ನೂ ಆರಂಭಿಸಿದರು. 

ಬೆಂಗಳೂರು (ಜ.12): ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ನಾಸಿಕ್‌ ಮತ್ತು ನವೀ ಮುಂಬೈನಲ್ಲಿ ಮೋದಿ ಮೆಗಾ ರೋಡ್‌ಶೋ ನಡೆಸಿದರು. ಈ ವೇಳೆ ನಾಸಿಕ್‌ನ ಕಾಲಾರಾಮ್‌ ಮಂದಿರಲ್ಲಿ ಮೋದಿ ಶ್ರಮಾದಾನ ಮತ್ತು ಪೂಜೆ ನಡೆಸಿದರು.

ನಾಸಿಕ್‌ನ ಕಾಲಾರಾಮ್‌ ದೇಗುಲದಲ್ಲಿಯೇ ಮೋದಿ ವ್ರತ ಆರಂಭಿಸಿದ್ದಾರೆ. ರಾಮಾಯಣಕ್ಕೂ ಈ ಕಾಲಾರಾಮ್‌ ದೇವಸ್ಥಾನಕ್ಕೂ ನಂಟಿದೆ. ಐದು ಆಲದ ಮರಗಳು ಒಟ್ಟಿಗೆ ಇರುವ ಇದೇ ಪ್ರದೇಶದಿಂದಲೇ ಸೀತಾ ಮಾತೆಯ ಅಪಹರಣವಾಗಿತ್ತು ಎನ್ನುವುದು ಪ್ರತೀತಿ.

ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ತಾಯಿ ಹೀರಾಬೆನ್‌ ಸಂದೇಶ ನೆನಪಿಸಿಕೊಂಡು ಭಾವುಕರಾದ ಪ್ರಧಾನಿ ಮೋದಿ!

1790 ರಲ್ಲಿ ಪೇಶ್ವೆ ಸರ್ದಾರ್ ಓಧೇಕರ್ ಈ ದೇವಸ್ಥಾನವನ್ನು ಕಟ್ಟಿದ್ದರು. ವಿಗ್ರಹ ಕಪ್ಪು ಬಣ್ಣದ್ದು.. ಹೀಗಾಗಿ ಕಾಲಾರಾಮ್ ಮಂದಿರ ಎಂದು ಕರೆಸಿಕೊಂಡಿದೆ. ಇಲ್ಲಿ ರಾಮನ ಜತೆಗೆ ಸೀತಾಮಾತೆ, ಲಕ್ಷ್ಮಣನ ವಿಗ್ರಹಗಳೂ ಇವೆ. ಇಡೀ ದೇಗುಲವನ್ನ ಕಪ್ಪು ಕಲ್ಲುಗಳಿಂದಲೇ ನಿರ್ಮಿಸಲಾಗಿದೆ. ಮಂದಿರದ ಶಿಖರವು 32 ಟನ್ ಚಿನ್ನದಿಂದ ಮಾಡಲಾಗಿದೆ ಎನ್ನಲಾಗಿದೆ. ಗೋಧಾವರಿಯಲ್ಲಿ ವಿಗ್ರಹ ಇದೆ ಎಂದು ರಾಜನಿಗೆ ಕನಸು ಬಿದ್ದಿತ್ತು. ಬಳಿಕ ನದಿಯಲ್ಲಿ ಹುಡುಕಿದಾಗ ಸಿಕ್ಕ ವಿಗ್ರಹ ಹೊರ ತೆಗೆದು ದೇವಸ್ಥಾನವನ್ನು ಕಟ್ಟಿದ್ದರು.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more