News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

News Hour: ಕಾಲಾರಾಮ್‌ ಮಂದಿರಕ್ಕೂ ರಾಮಾಯಣಕ್ಕೂ ಇರುವ ನಂಟೇನು?

Published : Jan 12, 2024, 11:26 PM IST

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಸಿಕ್‌ನ ಕಾಲಾರಾಮ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಮಾತ್ರವಲ್ಲದೇ ದೇವಸ್ಥಾನದ ಶುಚಿತ್ವ ಕಾರ್ಯವನ್ನೂ ಮಾಡಿ, ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವ್ರತವನ್ನೂ ಆರಂಭಿಸಿದರು. 

ಬೆಂಗಳೂರು (ಜ.12): ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ನಾಸಿಕ್‌ ಮತ್ತು ನವೀ ಮುಂಬೈನಲ್ಲಿ ಮೋದಿ ಮೆಗಾ ರೋಡ್‌ಶೋ ನಡೆಸಿದರು. ಈ ವೇಳೆ ನಾಸಿಕ್‌ನ ಕಾಲಾರಾಮ್‌ ಮಂದಿರಲ್ಲಿ ಮೋದಿ ಶ್ರಮಾದಾನ ಮತ್ತು ಪೂಜೆ ನಡೆಸಿದರು.

ನಾಸಿಕ್‌ನ ಕಾಲಾರಾಮ್‌ ದೇಗುಲದಲ್ಲಿಯೇ ಮೋದಿ ವ್ರತ ಆರಂಭಿಸಿದ್ದಾರೆ. ರಾಮಾಯಣಕ್ಕೂ ಈ ಕಾಲಾರಾಮ್‌ ದೇವಸ್ಥಾನಕ್ಕೂ ನಂಟಿದೆ. ಐದು ಆಲದ ಮರಗಳು ಒಟ್ಟಿಗೆ ಇರುವ ಇದೇ ಪ್ರದೇಶದಿಂದಲೇ ಸೀತಾ ಮಾತೆಯ ಅಪಹರಣವಾಗಿತ್ತು ಎನ್ನುವುದು ಪ್ರತೀತಿ.

ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ತಾಯಿ ಹೀರಾಬೆನ್‌ ಸಂದೇಶ ನೆನಪಿಸಿಕೊಂಡು ಭಾವುಕರಾದ ಪ್ರಧಾನಿ ಮೋದಿ!

1790 ರಲ್ಲಿ ಪೇಶ್ವೆ ಸರ್ದಾರ್ ಓಧೇಕರ್ ಈ ದೇವಸ್ಥಾನವನ್ನು ಕಟ್ಟಿದ್ದರು. ವಿಗ್ರಹ ಕಪ್ಪು ಬಣ್ಣದ್ದು.. ಹೀಗಾಗಿ ಕಾಲಾರಾಮ್ ಮಂದಿರ ಎಂದು ಕರೆಸಿಕೊಂಡಿದೆ. ಇಲ್ಲಿ ರಾಮನ ಜತೆಗೆ ಸೀತಾಮಾತೆ, ಲಕ್ಷ್ಮಣನ ವಿಗ್ರಹಗಳೂ ಇವೆ. ಇಡೀ ದೇಗುಲವನ್ನ ಕಪ್ಪು ಕಲ್ಲುಗಳಿಂದಲೇ ನಿರ್ಮಿಸಲಾಗಿದೆ. ಮಂದಿರದ ಶಿಖರವು 32 ಟನ್ ಚಿನ್ನದಿಂದ ಮಾಡಲಾಗಿದೆ ಎನ್ನಲಾಗಿದೆ. ಗೋಧಾವರಿಯಲ್ಲಿ ವಿಗ್ರಹ ಇದೆ ಎಂದು ರಾಜನಿಗೆ ಕನಸು ಬಿದ್ದಿತ್ತು. ಬಳಿಕ ನದಿಯಲ್ಲಿ ಹುಡುಕಿದಾಗ ಸಿಕ್ಕ ವಿಗ್ರಹ ಹೊರ ತೆಗೆದು ದೇವಸ್ಥಾನವನ್ನು ಕಟ್ಟಿದ್ದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more