Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Suvarna News   | Asianet News
Published : Mar 03, 2022, 08:26 PM ISTUpdated : Mar 03, 2022, 08:27 PM IST

ಯುದ್ಧಪೀಡಿತ ಉಕ್ರೇನ್ ದೇಶದಿಂದ ಮರಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು, ಸರ್ಕಾರಕ್ಕೆ ಧನ್ಯವಾದ ಎಂದ ವಿದ್ಯಾರ್ಥಿಗಳು

ವಾರಣಾಸಿ (ಮಾ. 3): ಯುದ್ಧಪೀಡಿತ ಉಕ್ರೇನ್ (War torn Ukraine) ದೇಶದಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi,) ಗುರುವಾರ ವಾರಣಾಸಿಯಲ್ಲಿ ಮಾತುಕತೆ ನಡೆಸಿದರು. ಈ ವೇಳೆ ರಕ್ಷಣಾ ಕಾರ್ಯಾಚರಣೆಯ ಕುರಿತಾಗಿ ಮೋದಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಂದಾಜು 20 ಸಾವಿರಕ್ಕೂ ಅಧಿಕ ಭಾರತೀಯರು ಉಕ್ರೇನ್ ನ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು, ವೈದ್ಯಕೀಯ ಅಭ್ಯಾಸ ಮಾಡುವವರಾಗಿದ್ದಾರೆ. ಯುದ್ಧ ಆರಂಭವಾದ ಬಳಿಕ ಆದ ಮಾನಸಿಕ ಹಿಂಸೆಗಳು ಹಾಗೂ ಆತಂಕದ ಬಗ್ಗೆ ವಿದ್ಯಾರ್ಥಿಗಳು ಪ್ರಧಾನಿಗೆ ಮಾಹಿತಿ ನೀಡಿದರು. 

ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು. ಈ ವೇಳೆ ಸರ್ಕಾರ ಸಹಾಯಕ್ಕೆ ಧಾವಿಸಿತು ಎಂದು ವಿದ್ಯಾರ್ಥಿಗಳು ತಿಳಿಸಿದರು. ಮಾರ್ಚ್ 2 ರಂದು ಭಾರತಕ್ಕೆ ಮರಳುವ ವಿಮಾನವನ್ನು ಬುಕ್ ಮಾಡಿದ್ದೆವು. ಅದಕ್ಕೂ ಮುನ್ನವೇ ಯುದ್ಧ ಆರಂಭವಾಗಿತ್ತು. ಆದರೆ, ಭಾರತದ ರಾಯಭಾರ ಕಚೇರಿ (Indian Embassy) ಹಾಗೂ ಕೇಂದ್ರ ಸರ್ಕಾರ ನಮ್ಮ ನೆರವಿಗೆ ಬಂದಿತು ಎಂದು ವಿದ್ಯಾರ್ಥಿನಿಯೊಬ್ಬರು ಈ ವೇಳೆ ಹೇಳಿದರು.

Asianet Suvarna Focus ತನ್ನ ಕುಟುಂಬವನ್ನ ಬಚ್ಚಿಟ್ಟ ಪುಟಿನ್, ಸ್ಫೋಟಕ ರಹಸ್ಯ ಬಿಚ್ಚಿಟ್ಟ ರಷ್ಯಾ ಪ್ರೊಫೆಸರ್
ಉಕ್ರೇನ್ ಗಡಿಯನ್ನು ದಾಟಿದ ಬಳಿಕ ಭಾರತದ ರಾಯಭಾರ ಕಚೇರಿ ಸುರಕ್ಷಿತವಾಗಿ ನಮ್ಮನ್ನು ದೇಶಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಮಾಡಿತು. ಆ ದೇಶದಲ್ಲಿ ಇನ್ನೂ ಸಿಲುಕಿಕೊಂಡಿರುವ ಭಾರತೀಯರನ್ನು ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಕರೆತರುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more