Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Suvarna News   | Asianet News
Published : Mar 03, 2022, 08:26 PM ISTUpdated : Mar 03, 2022, 08:27 PM IST

ಯುದ್ಧಪೀಡಿತ ಉಕ್ರೇನ್ ದೇಶದಿಂದ ಮರಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು, ಸರ್ಕಾರಕ್ಕೆ ಧನ್ಯವಾದ ಎಂದ ವಿದ್ಯಾರ್ಥಿಗಳು

ವಾರಣಾಸಿ (ಮಾ. 3): ಯುದ್ಧಪೀಡಿತ ಉಕ್ರೇನ್ (War torn Ukraine) ದೇಶದಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi,) ಗುರುವಾರ ವಾರಣಾಸಿಯಲ್ಲಿ ಮಾತುಕತೆ ನಡೆಸಿದರು. ಈ ವೇಳೆ ರಕ್ಷಣಾ ಕಾರ್ಯಾಚರಣೆಯ ಕುರಿತಾಗಿ ಮೋದಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಂದಾಜು 20 ಸಾವಿರಕ್ಕೂ ಅಧಿಕ ಭಾರತೀಯರು ಉಕ್ರೇನ್ ನ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು, ವೈದ್ಯಕೀಯ ಅಭ್ಯಾಸ ಮಾಡುವವರಾಗಿದ್ದಾರೆ. ಯುದ್ಧ ಆರಂಭವಾದ ಬಳಿಕ ಆದ ಮಾನಸಿಕ ಹಿಂಸೆಗಳು ಹಾಗೂ ಆತಂಕದ ಬಗ್ಗೆ ವಿದ್ಯಾರ್ಥಿಗಳು ಪ್ರಧಾನಿಗೆ ಮಾಹಿತಿ ನೀಡಿದರು. 

ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು. ಈ ವೇಳೆ ಸರ್ಕಾರ ಸಹಾಯಕ್ಕೆ ಧಾವಿಸಿತು ಎಂದು ವಿದ್ಯಾರ್ಥಿಗಳು ತಿಳಿಸಿದರು. ಮಾರ್ಚ್ 2 ರಂದು ಭಾರತಕ್ಕೆ ಮರಳುವ ವಿಮಾನವನ್ನು ಬುಕ್ ಮಾಡಿದ್ದೆವು. ಅದಕ್ಕೂ ಮುನ್ನವೇ ಯುದ್ಧ ಆರಂಭವಾಗಿತ್ತು. ಆದರೆ, ಭಾರತದ ರಾಯಭಾರ ಕಚೇರಿ (Indian Embassy) ಹಾಗೂ ಕೇಂದ್ರ ಸರ್ಕಾರ ನಮ್ಮ ನೆರವಿಗೆ ಬಂದಿತು ಎಂದು ವಿದ್ಯಾರ್ಥಿನಿಯೊಬ್ಬರು ಈ ವೇಳೆ ಹೇಳಿದರು.

Asianet Suvarna Focus ತನ್ನ ಕುಟುಂಬವನ್ನ ಬಚ್ಚಿಟ್ಟ ಪುಟಿನ್, ಸ್ಫೋಟಕ ರಹಸ್ಯ ಬಿಚ್ಚಿಟ್ಟ ರಷ್ಯಾ ಪ್ರೊಫೆಸರ್
ಉಕ್ರೇನ್ ಗಡಿಯನ್ನು ದಾಟಿದ ಬಳಿಕ ಭಾರತದ ರಾಯಭಾರ ಕಚೇರಿ ಸುರಕ್ಷಿತವಾಗಿ ನಮ್ಮನ್ನು ದೇಶಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಮಾಡಿತು. ಆ ದೇಶದಲ್ಲಿ ಇನ್ನೂ ಸಿಲುಕಿಕೊಂಡಿರುವ ಭಾರತೀಯರನ್ನು ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಕರೆತರುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more