Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Russia Ukraine Crisis ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಮೋದಿ ಮಾತು!

Suvarna News   | Asianet News
Published : Mar 03, 2022, 08:26 PM ISTUpdated : Mar 03, 2022, 08:27 PM IST

ಯುದ್ಧಪೀಡಿತ ಉಕ್ರೇನ್ ದೇಶದಿಂದ ಮರಿದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು, ಸರ್ಕಾರಕ್ಕೆ ಧನ್ಯವಾದ ಎಂದ ವಿದ್ಯಾರ್ಥಿಗಳು

ವಾರಣಾಸಿ (ಮಾ. 3): ಯುದ್ಧಪೀಡಿತ ಉಕ್ರೇನ್ (War torn Ukraine) ದೇಶದಿಂದ ಮರಳಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi,) ಗುರುವಾರ ವಾರಣಾಸಿಯಲ್ಲಿ ಮಾತುಕತೆ ನಡೆಸಿದರು. ಈ ವೇಳೆ ರಕ್ಷಣಾ ಕಾರ್ಯಾಚರಣೆಯ ಕುರಿತಾಗಿ ಮೋದಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಂದಾಜು 20 ಸಾವಿರಕ್ಕೂ ಅಧಿಕ ಭಾರತೀಯರು ಉಕ್ರೇನ್ ನ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು, ವೈದ್ಯಕೀಯ ಅಭ್ಯಾಸ ಮಾಡುವವರಾಗಿದ್ದಾರೆ. ಯುದ್ಧ ಆರಂಭವಾದ ಬಳಿಕ ಆದ ಮಾನಸಿಕ ಹಿಂಸೆಗಳು ಹಾಗೂ ಆತಂಕದ ಬಗ್ಗೆ ವಿದ್ಯಾರ್ಥಿಗಳು ಪ್ರಧಾನಿಗೆ ಮಾಹಿತಿ ನೀಡಿದರು. 

ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟಿದ್ದೆವು. ಈ ವೇಳೆ ಸರ್ಕಾರ ಸಹಾಯಕ್ಕೆ ಧಾವಿಸಿತು ಎಂದು ವಿದ್ಯಾರ್ಥಿಗಳು ತಿಳಿಸಿದರು. ಮಾರ್ಚ್ 2 ರಂದು ಭಾರತಕ್ಕೆ ಮರಳುವ ವಿಮಾನವನ್ನು ಬುಕ್ ಮಾಡಿದ್ದೆವು. ಅದಕ್ಕೂ ಮುನ್ನವೇ ಯುದ್ಧ ಆರಂಭವಾಗಿತ್ತು. ಆದರೆ, ಭಾರತದ ರಾಯಭಾರ ಕಚೇರಿ (Indian Embassy) ಹಾಗೂ ಕೇಂದ್ರ ಸರ್ಕಾರ ನಮ್ಮ ನೆರವಿಗೆ ಬಂದಿತು ಎಂದು ವಿದ್ಯಾರ್ಥಿನಿಯೊಬ್ಬರು ಈ ವೇಳೆ ಹೇಳಿದರು.

Asianet Suvarna Focus ತನ್ನ ಕುಟುಂಬವನ್ನ ಬಚ್ಚಿಟ್ಟ ಪುಟಿನ್, ಸ್ಫೋಟಕ ರಹಸ್ಯ ಬಿಚ್ಚಿಟ್ಟ ರಷ್ಯಾ ಪ್ರೊಫೆಸರ್
ಉಕ್ರೇನ್ ಗಡಿಯನ್ನು ದಾಟಿದ ಬಳಿಕ ಭಾರತದ ರಾಯಭಾರ ಕಚೇರಿ ಸುರಕ್ಷಿತವಾಗಿ ನಮ್ಮನ್ನು ದೇಶಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಮಾಡಿತು. ಆ ದೇಶದಲ್ಲಿ ಇನ್ನೂ ಸಿಲುಕಿಕೊಂಡಿರುವ ಭಾರತೀಯರನ್ನು ಯಶಸ್ವಿಯಾಗಿ ಭಾರತಕ್ಕೆ ವಾಪಸ್ ಕರೆತರುತ್ತೀರಿ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more