ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

Published : Jun 16, 2020, 10:32 AM ISTUpdated : Jun 16, 2020, 10:37 AM IST

ನಮೋ ಅನ್‌ಲಾಕ್‌ 2.0?| ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ| ಕೊರೋನಾ ನಿಯಂತ್ರಣ, ಲಾಕ್‌ಡೌನ್‌ ಸಡಿಲಿಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮಾತುಕತೆ| ನಾಳೆ ಸಭೆಯಲ್ಲಿ ಯಡಿಯೂರಪ್ಪ ಭಾಗಿ| ಏನು ನಿರ್ಧಾರ ಆಗುತ್ತೆ? ಭಾರೀ ಕುತೂಹಲ

ಬೆಂಗಳೂರು(ಜೂ.16): ದೇಶಾದ್ಯಂತ ಕೊರೋನಾ ಸೋಂಕು ಮೀತಿ ಮೀರಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಾಗೂ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ಹಮ್ಮಿಕೊಂಡಿದ್ದಾರೆ.

ರಾಜ್ಯಗಳನ್ನು 2 ಗುಂಪುಗಳಾಗಿ ವಿಂಗಡಿಸಿದ್ದು ಮಂಗಳವಾರ 21 ಮತ್ತು ಬುಧವಾರ 15 ರಾಜ್ಯಗಳ ಮುಖ್ಯಮಂತ್ರಿಗಳು/ ರಾಜ್ಯಪಾಲರು ಇದರಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ನಡೆಸುತ್ತಿರುವ ಈ 6ನೇ ಸಂವಾದದಲ್ಲಿ ಅನ್‌ಲಾಕ್‌ 1ರ ಅವಧಿಯಲ್ಲಿ ದೇಶಾದ್ಯಂತ ಹೆಚ್ಚುತ್ತಿರುವ ಸೋಂಕು, ಸಾವಿನ ಪ್ರಮಾಣದ ಬಗ್ಗೆ ಗಮನ ಹರಿಸಲಾಗುವುದು. ಅದರಲ್ಲೂ ಹೆಚ್ಚಿನ ಸೋಂಕು, ಸಾವು ಕಂಡುಬಂದಿರುವ ರಾಜ್ಯಗಳು ಮತ್ತು ಮಹಾನಗರಗಳಲ್ಲಿನ ಹಾಲಿ ಪರಿಸ್ಥಿತಿ ಮತ್ತು ಮುಂದೆ ಸೋಂಕು ವ್ಯಾಪಕವಾಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಸೋಂಕು ಸ್ಫೋಟದ ಖಚಿತ ಮಾಹಿತಿ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌, ವೈದ್ಯರ ಲಭ್ಯತೆ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು