ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

Published : Jun 16, 2020, 10:32 AM ISTUpdated : Jun 16, 2020, 10:37 AM IST

ನಮೋ ಅನ್‌ಲಾಕ್‌ 2.0?| ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ| ಕೊರೋನಾ ನಿಯಂತ್ರಣ, ಲಾಕ್‌ಡೌನ್‌ ಸಡಿಲಿಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮಾತುಕತೆ| ನಾಳೆ ಸಭೆಯಲ್ಲಿ ಯಡಿಯೂರಪ್ಪ ಭಾಗಿ| ಏನು ನಿರ್ಧಾರ ಆಗುತ್ತೆ? ಭಾರೀ ಕುತೂಹಲ

ಬೆಂಗಳೂರು(ಜೂ.16): ದೇಶಾದ್ಯಂತ ಕೊರೋನಾ ಸೋಂಕು ಮೀತಿ ಮೀರಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಾಗೂ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ಹಮ್ಮಿಕೊಂಡಿದ್ದಾರೆ.

ರಾಜ್ಯಗಳನ್ನು 2 ಗುಂಪುಗಳಾಗಿ ವಿಂಗಡಿಸಿದ್ದು ಮಂಗಳವಾರ 21 ಮತ್ತು ಬುಧವಾರ 15 ರಾಜ್ಯಗಳ ಮುಖ್ಯಮಂತ್ರಿಗಳು/ ರಾಜ್ಯಪಾಲರು ಇದರಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ನಡೆಸುತ್ತಿರುವ ಈ 6ನೇ ಸಂವಾದದಲ್ಲಿ ಅನ್‌ಲಾಕ್‌ 1ರ ಅವಧಿಯಲ್ಲಿ ದೇಶಾದ್ಯಂತ ಹೆಚ್ಚುತ್ತಿರುವ ಸೋಂಕು, ಸಾವಿನ ಪ್ರಮಾಣದ ಬಗ್ಗೆ ಗಮನ ಹರಿಸಲಾಗುವುದು. ಅದರಲ್ಲೂ ಹೆಚ್ಚಿನ ಸೋಂಕು, ಸಾವು ಕಂಡುಬಂದಿರುವ ರಾಜ್ಯಗಳು ಮತ್ತು ಮಹಾನಗರಗಳಲ್ಲಿನ ಹಾಲಿ ಪರಿಸ್ಥಿತಿ ಮತ್ತು ಮುಂದೆ ಸೋಂಕು ವ್ಯಾಪಕವಾಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಸೋಂಕು ಸ್ಫೋಟದ ಖಚಿತ ಮಾಹಿತಿ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌, ವೈದ್ಯರ ಲಭ್ಯತೆ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?