ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

Published : Jun 16, 2020, 10:32 AM ISTUpdated : Jun 16, 2020, 10:37 AM IST

ನಮೋ ಅನ್‌ಲಾಕ್‌ 2.0?| ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ| ಕೊರೋನಾ ನಿಯಂತ್ರಣ, ಲಾಕ್‌ಡೌನ್‌ ಸಡಿಲಿಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮಾತುಕತೆ| ನಾಳೆ ಸಭೆಯಲ್ಲಿ ಯಡಿಯೂರಪ್ಪ ಭಾಗಿ| ಏನು ನಿರ್ಧಾರ ಆಗುತ್ತೆ? ಭಾರೀ ಕುತೂಹಲ

ಬೆಂಗಳೂರು(ಜೂ.16): ದೇಶಾದ್ಯಂತ ಕೊರೋನಾ ಸೋಂಕು ಮೀತಿ ಮೀರಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಾಗೂ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ಹಮ್ಮಿಕೊಂಡಿದ್ದಾರೆ.

ರಾಜ್ಯಗಳನ್ನು 2 ಗುಂಪುಗಳಾಗಿ ವಿಂಗಡಿಸಿದ್ದು ಮಂಗಳವಾರ 21 ಮತ್ತು ಬುಧವಾರ 15 ರಾಜ್ಯಗಳ ಮುಖ್ಯಮಂತ್ರಿಗಳು/ ರಾಜ್ಯಪಾಲರು ಇದರಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ನಡೆಸುತ್ತಿರುವ ಈ 6ನೇ ಸಂವಾದದಲ್ಲಿ ಅನ್‌ಲಾಕ್‌ 1ರ ಅವಧಿಯಲ್ಲಿ ದೇಶಾದ್ಯಂತ ಹೆಚ್ಚುತ್ತಿರುವ ಸೋಂಕು, ಸಾವಿನ ಪ್ರಮಾಣದ ಬಗ್ಗೆ ಗಮನ ಹರಿಸಲಾಗುವುದು. ಅದರಲ್ಲೂ ಹೆಚ್ಚಿನ ಸೋಂಕು, ಸಾವು ಕಂಡುಬಂದಿರುವ ರಾಜ್ಯಗಳು ಮತ್ತು ಮಹಾನಗರಗಳಲ್ಲಿನ ಹಾಲಿ ಪರಿಸ್ಥಿತಿ ಮತ್ತು ಮುಂದೆ ಸೋಂಕು ವ್ಯಾಪಕವಾಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಸೋಂಕು ಸ್ಫೋಟದ ಖಚಿತ ಮಾಹಿತಿ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌, ವೈದ್ಯರ ಲಭ್ಯತೆ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?