ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

Published : Jun 16, 2020, 10:32 AM ISTUpdated : Jun 16, 2020, 10:37 AM IST

ನಮೋ ಅನ್‌ಲಾಕ್‌ 2.0?| ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ| ಕೊರೋನಾ ನಿಯಂತ್ರಣ, ಲಾಕ್‌ಡೌನ್‌ ಸಡಿಲಿಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮಾತುಕತೆ| ನಾಳೆ ಸಭೆಯಲ್ಲಿ ಯಡಿಯೂರಪ್ಪ ಭಾಗಿ| ಏನು ನಿರ್ಧಾರ ಆಗುತ್ತೆ? ಭಾರೀ ಕುತೂಹಲ

ಬೆಂಗಳೂರು(ಜೂ.16): ದೇಶಾದ್ಯಂತ ಕೊರೋನಾ ಸೋಂಕು ಮೀತಿ ಮೀರಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಾಗೂ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ಹಮ್ಮಿಕೊಂಡಿದ್ದಾರೆ.

ರಾಜ್ಯಗಳನ್ನು 2 ಗುಂಪುಗಳಾಗಿ ವಿಂಗಡಿಸಿದ್ದು ಮಂಗಳವಾರ 21 ಮತ್ತು ಬುಧವಾರ 15 ರಾಜ್ಯಗಳ ಮುಖ್ಯಮಂತ್ರಿಗಳು/ ರಾಜ್ಯಪಾಲರು ಇದರಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ನಡೆಸುತ್ತಿರುವ ಈ 6ನೇ ಸಂವಾದದಲ್ಲಿ ಅನ್‌ಲಾಕ್‌ 1ರ ಅವಧಿಯಲ್ಲಿ ದೇಶಾದ್ಯಂತ ಹೆಚ್ಚುತ್ತಿರುವ ಸೋಂಕು, ಸಾವಿನ ಪ್ರಮಾಣದ ಬಗ್ಗೆ ಗಮನ ಹರಿಸಲಾಗುವುದು. ಅದರಲ್ಲೂ ಹೆಚ್ಚಿನ ಸೋಂಕು, ಸಾವು ಕಂಡುಬಂದಿರುವ ರಾಜ್ಯಗಳು ಮತ್ತು ಮಹಾನಗರಗಳಲ್ಲಿನ ಹಾಲಿ ಪರಿಸ್ಥಿತಿ ಮತ್ತು ಮುಂದೆ ಸೋಂಕು ವ್ಯಾಪಕವಾಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಸೋಂಕು ಸ್ಫೋಟದ ಖಚಿತ ಮಾಹಿತಿ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌, ವೈದ್ಯರ ಲಭ್ಯತೆ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!