ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

Published : Jun 16, 2020, 10:32 AM ISTUpdated : Jun 16, 2020, 10:37 AM IST

ನಮೋ ಅನ್‌ಲಾಕ್‌ 2.0?| ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ| ಕೊರೋನಾ ನಿಯಂತ್ರಣ, ಲಾಕ್‌ಡೌನ್‌ ಸಡಿಲಿಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮಾತುಕತೆ| ನಾಳೆ ಸಭೆಯಲ್ಲಿ ಯಡಿಯೂರಪ್ಪ ಭಾಗಿ| ಏನು ನಿರ್ಧಾರ ಆಗುತ್ತೆ? ಭಾರೀ ಕುತೂಹಲ

ಬೆಂಗಳೂರು(ಜೂ.16): ದೇಶಾದ್ಯಂತ ಕೊರೋನಾ ಸೋಂಕು ಮೀತಿ ಮೀರಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಾಗೂ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ಹಮ್ಮಿಕೊಂಡಿದ್ದಾರೆ.

ರಾಜ್ಯಗಳನ್ನು 2 ಗುಂಪುಗಳಾಗಿ ವಿಂಗಡಿಸಿದ್ದು ಮಂಗಳವಾರ 21 ಮತ್ತು ಬುಧವಾರ 15 ರಾಜ್ಯಗಳ ಮುಖ್ಯಮಂತ್ರಿಗಳು/ ರಾಜ್ಯಪಾಲರು ಇದರಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ನಡೆಸುತ್ತಿರುವ ಈ 6ನೇ ಸಂವಾದದಲ್ಲಿ ಅನ್‌ಲಾಕ್‌ 1ರ ಅವಧಿಯಲ್ಲಿ ದೇಶಾದ್ಯಂತ ಹೆಚ್ಚುತ್ತಿರುವ ಸೋಂಕು, ಸಾವಿನ ಪ್ರಮಾಣದ ಬಗ್ಗೆ ಗಮನ ಹರಿಸಲಾಗುವುದು. ಅದರಲ್ಲೂ ಹೆಚ್ಚಿನ ಸೋಂಕು, ಸಾವು ಕಂಡುಬಂದಿರುವ ರಾಜ್ಯಗಳು ಮತ್ತು ಮಹಾನಗರಗಳಲ್ಲಿನ ಹಾಲಿ ಪರಿಸ್ಥಿತಿ ಮತ್ತು ಮುಂದೆ ಸೋಂಕು ವ್ಯಾಪಕವಾಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಸೋಂಕು ಸ್ಫೋಟದ ಖಚಿತ ಮಾಹಿತಿ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌, ವೈದ್ಯರ ಲಭ್ಯತೆ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!