ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

ಅನ್‌ಲಾಕ್‌ 2.0?: ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ!

Published : Jun 16, 2020, 10:32 AM ISTUpdated : Jun 16, 2020, 10:37 AM IST

ನಮೋ ಅನ್‌ಲಾಕ್‌ 2.0?| ಇಂದು, ನಾಳೆ ಸಿಎಂಗಳ ಜತೆ ಮೋದಿ ಸಂವಾದ| ಕೊರೋನಾ ನಿಯಂತ್ರಣ, ಲಾಕ್‌ಡೌನ್‌ ಸಡಿಲಿಕೆ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮಾತುಕತೆ| ನಾಳೆ ಸಭೆಯಲ್ಲಿ ಯಡಿಯೂರಪ್ಪ ಭಾಗಿ| ಏನು ನಿರ್ಧಾರ ಆಗುತ್ತೆ? ಭಾರೀ ಕುತೂಹಲ

ಬೆಂಗಳೂರು(ಜೂ.16): ದೇಶಾದ್ಯಂತ ಕೊರೋನಾ ಸೋಂಕು ಮೀತಿ ಮೀರಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಾಗೂ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಸಂವಾದ ಹಮ್ಮಿಕೊಂಡಿದ್ದಾರೆ.

ರಾಜ್ಯಗಳನ್ನು 2 ಗುಂಪುಗಳಾಗಿ ವಿಂಗಡಿಸಿದ್ದು ಮಂಗಳವಾರ 21 ಮತ್ತು ಬುಧವಾರ 15 ರಾಜ್ಯಗಳ ಮುಖ್ಯಮಂತ್ರಿಗಳು/ ರಾಜ್ಯಪಾಲರು ಇದರಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ನಡೆಸುತ್ತಿರುವ ಈ 6ನೇ ಸಂವಾದದಲ್ಲಿ ಅನ್‌ಲಾಕ್‌ 1ರ ಅವಧಿಯಲ್ಲಿ ದೇಶಾದ್ಯಂತ ಹೆಚ್ಚುತ್ತಿರುವ ಸೋಂಕು, ಸಾವಿನ ಪ್ರಮಾಣದ ಬಗ್ಗೆ ಗಮನ ಹರಿಸಲಾಗುವುದು. ಅದರಲ್ಲೂ ಹೆಚ್ಚಿನ ಸೋಂಕು, ಸಾವು ಕಂಡುಬಂದಿರುವ ರಾಜ್ಯಗಳು ಮತ್ತು ಮಹಾನಗರಗಳಲ್ಲಿನ ಹಾಲಿ ಪರಿಸ್ಥಿತಿ ಮತ್ತು ಮುಂದೆ ಸೋಂಕು ವ್ಯಾಪಕವಾಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಸೋಂಕು ಸ್ಫೋಟದ ಖಚಿತ ಮಾಹಿತಿ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌, ವೈದ್ಯರ ಲಭ್ಯತೆ ಬಗ್ಗೆಯೂ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?