ದೆಹಲಿ ಸಿಂಘು ಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ, ರೈತರ ಮೇಲೆ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ

Jan 29, 2021, 4:43 PM IST

ನವದೆಹಲಿ(ಜ. 29): ಸಿಂಘು ಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸ್ಥಳೀಯರು ಮತ್ತು ರೈತರ ನಡುವೆ ಸಂಘರ್ಷ, ಮಾತಿನ ಚಕಮಕಿ ನಡೆದಿದೆ.  ಪ್ರತಿಭಟನಾನಿರತರ ಮೇಲೆ ಪೊಲೀಸರ ಮೇಲೆ ಅಶ್ರುವಾಯು ಸಿಡಿಸಿದ್ದಾರೆ. 

ದೆಹಲಿ ದಂಗಲ್ : ಲಾಲ್ ಕಿಲಾ ಕೋಲಾಹಲ ಸೃಷ್ಟಿಸಿದವರೇ ನಾಪತ್ತೆ!

ಪ್ರತಿಭಟನೆ ನಡೆಯುತ್ತಿರುವ ಸ್ಥಳದಿಂದ ರೈತರನ್ನು ತೆರವುಗೊಳಿಸಬೇಕಂದು ಅಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳೀಯರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ರೈತರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ.