ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

Published : Jul 08, 2024, 11:19 AM ISTUpdated : Jul 08, 2024, 11:20 AM IST

ಮೊದಲಿಗೆ ನಮಗೆ ಹಣ ಬಂದಿಲ್ಲ ಎಂದು ಹುತಾತ್ಮ ಯೋಧನ ತಂದೆ..!
ರಾಹುಲ್ ಗಾಂಧಿ, ರಾಜನಾಥ್ ಸಿಂಗ್ ಮಧ್ಯೆ ‘ಅಗ್ನಿವೀರ’ ಸಂಘರ್ಷ..!
ಏನಿದು ಅಗ್ನಿಪಥ್‌ ಯೋಜನೆ? ಅಗ್ನಿವೀರರಿಗೆ ಸಿಗುವ ಸೌಲಭ್ಯಗಳೇನು?


ದೇಶ ಕಾಯುವ ಕಾಯಕದ ವೇಳೆ ಮಡಿದ ಅಗ್ನಿವೀರರಿಗೆ(Agniveer) ಒಂದು ಕೋಟಿ ರೂ. ಪರಿಹಾರ(Compensation) ನೀಡಲಾಗಿದೆ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಅವರ ಹೇಳಿಕೆ ಸುಳ್ಳು ಎಂದೆಲ್ಲಾ ಆರೋಪ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಆರೋಪಕ್ಕೆ ಸೇನೆ ತಿರುಗೇಟು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದೆ. ಭಾರತೀಯ ಸೇನೆಯ(Indian Army) ಎಡಿಜಿಪಿಗೆ ಸೇರಿದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ರಾಹುಲ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯುತ್ತರ ನೀಡಲಾಗಿದೆ. ಸೇನಾ ಕಾರ್ಯಾಚರಣೆ ವೇಳೆ ಮಡಿದ ಅಗ್ನಿವೀರ್ ಅಜಯ್ ಕುಮಾರ್ ಎಂಬವರ ಕುಟುಂಬಕ್ಕೆ 98.39 ಲಕ್ಷ ರೂಪಾಯಿಯನ್ನು ಪಾವತಿ ಮಾಡಲಾಗಿದೆ. ಅಗ್ನಿವೀರ್ ಅಜಯ್‌ ಕುಮಾರ್ ಅವರ ಶ್ರೇಷ್ಠ ತ್ಯಾಗಕ್ಕೆ ಭಾರತೀಯ ಸೇನೆ ಗೌರವ ಸಲ್ಲಿಸುತ್ತದೆ. ಅವರ ಅಂತಿಮ ಕಾರ್ಯಗಳನ್ನು ಸಕಲ ಸೇನಾ ಗೌರವಗಳೊಂದಿಗೆ ಮಾಡಲಾಯ್ತು. ಅವರ ಕುಟುಂಬಕ್ಕೆ 98.39 ಲಕ್ಷವನ್ನು ಪರಿಹಾರವಾಗಿ ನೀಡಲಾಗಿದೆ.  ಅಗ್ನಿವೀರ್‌ ಯೋಜನೆಯ  ನಿಯಮಗಳ ಪ್ರಕಾರ, 67 ಲಕ್ಷದ ಹೆಚ್ಚಿನ ( Ex - Gratia and other benefits)ಹಣ ಹಾಗೂ ಸೌಲಭ್ಯಗಳನ್ನು ಕೆಲ ಪೊಲೀಸ್ ಪರಿಶೀಲನೆಯ ನಂತರ ಶೀಘ್ರದಲ್ಲೇ ಸೆಟಲ್‌ಮೆಂಟ್ ಮಾಡಲಾಗುತ್ತದೆ. ಇದೆಲ್ಲ ಸೇರಿ ಒಟ್ಟು ಅಂದಾಜು 1.65 ಕೋಟಿ ಹಣ ಅಗ್ನಿವೀರ್ ಅಜಯ್‌ ಕುಮಾರ್ ಸಂಬಂಧಿಗಳಿಗೆ ಸೇರುತ್ತದೆ.

ಇದನ್ನೂ ವೀಕ್ಷಿಸಿ:  ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more