ಮಹಾಕುಂಭ ಮೇಳಕ್ಕೆ ಖರ್ಚೆಷ್ಟು? ಆದಾಯ ಎಷ್ಟು? 'ಹೊಟ್ಟೆ ತುಂಬುತ್ತಾ' ಅಂದವರಿಗೆ ಲಕ್ಷ ಕೋಟಿ ಆದಾಯದ ಉತ್ತರ!

ಮಹಾಕುಂಭ ಮೇಳಕ್ಕೆ ಖರ್ಚೆಷ್ಟು? ಆದಾಯ ಎಷ್ಟು? 'ಹೊಟ್ಟೆ ತುಂಬುತ್ತಾ' ಅಂದವರಿಗೆ ಲಕ್ಷ ಕೋಟಿ ಆದಾಯದ ಉತ್ತರ!

Published : Jan 29, 2025, 07:45 PM IST

ಮಲ್ಲಿಕಾರ್ಜುನ ಖರ್ಗೆಯವರ ಗಂಗಾ ಸ್ನಾನದ ಟೀಕೆ ವಿವಾದಕ್ಕೆ ಕಾರಣವಾಗಿದ್ದು, ಕುಂಭಮೇಳದಿಂದ ಲಕ್ಷ ಕೋಟಿ ಆದಾಯ ಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. 7,500 ಕೋಟಿ ರೂಪಾಯಿ ಬಜೆಟ್‌ನ ಮಹಾಕುಂಭ ಮೇಳಕ್ಕೆ 40 ಕೋಟಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆಯಿದ್ದು, 2 ರಿಂದ 4 ಲಕ್ಷ ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ.

ಪವಿತ್ರ ಗಂಗಾ ಸ್ನಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರ ಬಾಯಲ್ಲಿ ಬಂದ ಮಾತು ಇಡೀ ದೇಶದ ಹಿಂದೂಗಳಲ್ಲಿ ಬೆಂಕಿ ಹೊತ್ತಿಸುವಂತಾಗಿತ್ತು. ಗಂಗಾ ಸ್ನಾನದಿಂದ ದೇಶದ ಬಡತನ ದೂರವಾಗುತ್ತಾ, ಬಡವರ ಹೊಟ್ಟೆ ತುಂಬುತ್ತಾ ಎಂದು ಟೀಕೆ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸುವ ಭರದಲ್ಲಿ ಖರ್ಗೆ ಬಾಯಲ್ಲಿ ಅಳತೆ ಮೀರಿತ ಮಾತು ಹೊರಗೆ ಬಂದಿತ್ತು. ಆದರೆ, ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆ ಒಂದು ಮಾತು ಕಾಂಗ್ರೆಸ್‌ ಪಕ್ಷಕ್ಕೆ ಆಪತ್ತು ಆಗುವ ಸನ್ನಿವೇಶನ ನಿರ್ಮಾಣ ಆಗಲಿದೆ. ಖರ್ಗೆ ಹೊತ್ತಿಸಿದ ಕುಂಭ ಕಿಚ್ಚಿನಲ್ಲಿ ರಾಜಕೀಯ ಜ್ವಾಲೆ ಧಗ ಧಗ ಉರಿಯುತ್ತಿದೆ. ಇದೇ ಸಂದರ್ಭದಲ್ಲಿ ಕುಂಭ ಮೇಳದಿಂದ ಸಾವಿರ ಕೋಟಿಗಳ ಲೆಕ್ಕದಲ್ಲಿ ಖರ್ಚು, ಲಕ್ಷ ಕೋಟಿಗಳ ಲೆಕ್ಕದಲ್ಲಿ ಆದಾಯ ಬರುತ್ತಿದೆ ಎನ್ನುವುದು ಇದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಪ್ರಯಾಗ್'ರಾಜ್'ನಲ್ಲಿ ನಡೀತಾ ಇರೋ ಮಹಾಕುಂಭ ಮೇಳದ ಒಟ್ಟು ಬಜೆಟ್ 7,500 ಕೋಟಿ ರೂಪಾಯಿ. ಅದರಲ್ಲಿ ಉಫತ್ತರ ಪ್ರದೇಶ ಸರ್ಕಾರದ ಪಾಲು 5,400 ಕೋಟಿ ರೂಪಾಯಿ, ಕೇಂದ್ರ ಸರ್ಕಾರದ ಪಾಲು 2,100 ಕೋಟಿ ರೂಪಾಯಿ ಇದೆ. ಮಹಾಕುಂಭ ಮೇಳದಿಂದ ಬರಲಿರುವ ಅಂದಾಜು ಆದಾಯ 2ರಿಂದ 4 ಲಕ್ಷ ಕೋಟಿ ರೂಪಾಯಿ ಆಗಿದೆ. ಒಟ್ಟು 45 ದಿನಗಳ ಮಹಾಕುಂಭಮೇಳಕ್ಕೆ ಸರಿ ಸುಮಾರು 40 ಕೋಟಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆಯಿದೆ. CAIT ಅಂದ್ರೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದತ್ತಾಂಶದ ಪ್ರಕಾರ ಶೇ.80ರಷ್ಟು ಪ್ರವಾಸಿಗರು ತಲಾ ₹5,000 ಖರ್ಚು ಮಾಡಲಿದ್ದಾರೆ ಎಂದು ಅಂದಾಜಿಸಿದೆ. ಈ ಲೆಕ್ಕದ ಪ್ರಕಾರ ಮಹಾಕುಂಭ ಮೇಳದಲ್ಲಿ ನಡೆಯಲಿರುವ ಒಟ್ಟು ವ್ಯವಹಾರ ಮತ್ತು ಆದಾಯ ₹ 2 ಲಕ್ಷ ಕೋಟಿ ದಾಟಲಿದೆ. ಒಬ್ಬ ಪ್ರವಾಸಿಗ ₹10 ಸಾವಿರದಂತೆ ಖರ್ಚು ಮಾಡಿದರೆ ಸುಮಾರು 4 ಲಕ್ಷ ಕೋಟಿ ಆದಾಯದ ನಿರೀಕ್ಷೆಯಿದೆ ಎನ್ನುತ್ತದೆ ಅಂದ್ರೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದತ್ತಾಂಶ ವರದಿ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more