ಮಹಾಕುಂಭ ಮೇಳಕ್ಕೆ ಖರ್ಚೆಷ್ಟು? ಆದಾಯ ಎಷ್ಟು? 'ಹೊಟ್ಟೆ ತುಂಬುತ್ತಾ' ಅಂದವರಿಗೆ ಲಕ್ಷ ಕೋಟಿ ಆದಾಯದ ಉತ್ತರ!

ಮಹಾಕುಂಭ ಮೇಳಕ್ಕೆ ಖರ್ಚೆಷ್ಟು? ಆದಾಯ ಎಷ್ಟು? 'ಹೊಟ್ಟೆ ತುಂಬುತ್ತಾ' ಅಂದವರಿಗೆ ಲಕ್ಷ ಕೋಟಿ ಆದಾಯದ ಉತ್ತರ!

Published : Jan 29, 2025, 07:45 PM IST

ಮಲ್ಲಿಕಾರ್ಜುನ ಖರ್ಗೆಯವರ ಗಂಗಾ ಸ್ನಾನದ ಟೀಕೆ ವಿವಾದಕ್ಕೆ ಕಾರಣವಾಗಿದ್ದು, ಕುಂಭಮೇಳದಿಂದ ಲಕ್ಷ ಕೋಟಿ ಆದಾಯ ಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. 7,500 ಕೋಟಿ ರೂಪಾಯಿ ಬಜೆಟ್‌ನ ಮಹಾಕುಂಭ ಮೇಳಕ್ಕೆ 40 ಕೋಟಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆಯಿದ್ದು, 2 ರಿಂದ 4 ಲಕ್ಷ ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ.

ಪವಿತ್ರ ಗಂಗಾ ಸ್ನಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರ ಬಾಯಲ್ಲಿ ಬಂದ ಮಾತು ಇಡೀ ದೇಶದ ಹಿಂದೂಗಳಲ್ಲಿ ಬೆಂಕಿ ಹೊತ್ತಿಸುವಂತಾಗಿತ್ತು. ಗಂಗಾ ಸ್ನಾನದಿಂದ ದೇಶದ ಬಡತನ ದೂರವಾಗುತ್ತಾ, ಬಡವರ ಹೊಟ್ಟೆ ತುಂಬುತ್ತಾ ಎಂದು ಟೀಕೆ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸುವ ಭರದಲ್ಲಿ ಖರ್ಗೆ ಬಾಯಲ್ಲಿ ಅಳತೆ ಮೀರಿತ ಮಾತು ಹೊರಗೆ ಬಂದಿತ್ತು. ಆದರೆ, ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆ ಒಂದು ಮಾತು ಕಾಂಗ್ರೆಸ್‌ ಪಕ್ಷಕ್ಕೆ ಆಪತ್ತು ಆಗುವ ಸನ್ನಿವೇಶನ ನಿರ್ಮಾಣ ಆಗಲಿದೆ. ಖರ್ಗೆ ಹೊತ್ತಿಸಿದ ಕುಂಭ ಕಿಚ್ಚಿನಲ್ಲಿ ರಾಜಕೀಯ ಜ್ವಾಲೆ ಧಗ ಧಗ ಉರಿಯುತ್ತಿದೆ. ಇದೇ ಸಂದರ್ಭದಲ್ಲಿ ಕುಂಭ ಮೇಳದಿಂದ ಸಾವಿರ ಕೋಟಿಗಳ ಲೆಕ್ಕದಲ್ಲಿ ಖರ್ಚು, ಲಕ್ಷ ಕೋಟಿಗಳ ಲೆಕ್ಕದಲ್ಲಿ ಆದಾಯ ಬರುತ್ತಿದೆ ಎನ್ನುವುದು ಇದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಪ್ರಯಾಗ್'ರಾಜ್'ನಲ್ಲಿ ನಡೀತಾ ಇರೋ ಮಹಾಕುಂಭ ಮೇಳದ ಒಟ್ಟು ಬಜೆಟ್ 7,500 ಕೋಟಿ ರೂಪಾಯಿ. ಅದರಲ್ಲಿ ಉಫತ್ತರ ಪ್ರದೇಶ ಸರ್ಕಾರದ ಪಾಲು 5,400 ಕೋಟಿ ರೂಪಾಯಿ, ಕೇಂದ್ರ ಸರ್ಕಾರದ ಪಾಲು 2,100 ಕೋಟಿ ರೂಪಾಯಿ ಇದೆ. ಮಹಾಕುಂಭ ಮೇಳದಿಂದ ಬರಲಿರುವ ಅಂದಾಜು ಆದಾಯ 2ರಿಂದ 4 ಲಕ್ಷ ಕೋಟಿ ರೂಪಾಯಿ ಆಗಿದೆ. ಒಟ್ಟು 45 ದಿನಗಳ ಮಹಾಕುಂಭಮೇಳಕ್ಕೆ ಸರಿ ಸುಮಾರು 40 ಕೋಟಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆಯಿದೆ. CAIT ಅಂದ್ರೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದತ್ತಾಂಶದ ಪ್ರಕಾರ ಶೇ.80ರಷ್ಟು ಪ್ರವಾಸಿಗರು ತಲಾ ₹5,000 ಖರ್ಚು ಮಾಡಲಿದ್ದಾರೆ ಎಂದು ಅಂದಾಜಿಸಿದೆ. ಈ ಲೆಕ್ಕದ ಪ್ರಕಾರ ಮಹಾಕುಂಭ ಮೇಳದಲ್ಲಿ ನಡೆಯಲಿರುವ ಒಟ್ಟು ವ್ಯವಹಾರ ಮತ್ತು ಆದಾಯ ₹ 2 ಲಕ್ಷ ಕೋಟಿ ದಾಟಲಿದೆ. ಒಬ್ಬ ಪ್ರವಾಸಿಗ ₹10 ಸಾವಿರದಂತೆ ಖರ್ಚು ಮಾಡಿದರೆ ಸುಮಾರು 4 ಲಕ್ಷ ಕೋಟಿ ಆದಾಯದ ನಿರೀಕ್ಷೆಯಿದೆ ಎನ್ನುತ್ತದೆ ಅಂದ್ರೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದತ್ತಾಂಶ ವರದಿ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more