ಮಹಾಕುಂಭ ಮೇಳಕ್ಕೆ ಖರ್ಚೆಷ್ಟು? ಆದಾಯ ಎಷ್ಟು? 'ಹೊಟ್ಟೆ ತುಂಬುತ್ತಾ' ಅಂದವರಿಗೆ ಲಕ್ಷ ಕೋಟಿ ಆದಾಯದ ಉತ್ತರ!

ಮಹಾಕುಂಭ ಮೇಳಕ್ಕೆ ಖರ್ಚೆಷ್ಟು? ಆದಾಯ ಎಷ್ಟು? 'ಹೊಟ್ಟೆ ತುಂಬುತ್ತಾ' ಅಂದವರಿಗೆ ಲಕ್ಷ ಕೋಟಿ ಆದಾಯದ ಉತ್ತರ!

Published : Jan 29, 2025, 07:45 PM IST

ಮಲ್ಲಿಕಾರ್ಜುನ ಖರ್ಗೆಯವರ ಗಂಗಾ ಸ್ನಾನದ ಟೀಕೆ ವಿವಾದಕ್ಕೆ ಕಾರಣವಾಗಿದ್ದು, ಕುಂಭಮೇಳದಿಂದ ಲಕ್ಷ ಕೋಟಿ ಆದಾಯ ಬರುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. 7,500 ಕೋಟಿ ರೂಪಾಯಿ ಬಜೆಟ್‌ನ ಮಹಾಕುಂಭ ಮೇಳಕ್ಕೆ 40 ಕೋಟಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆಯಿದ್ದು, 2 ರಿಂದ 4 ಲಕ್ಷ ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ.

ಪವಿತ್ರ ಗಂಗಾ ಸ್ನಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರ ಬಾಯಲ್ಲಿ ಬಂದ ಮಾತು ಇಡೀ ದೇಶದ ಹಿಂದೂಗಳಲ್ಲಿ ಬೆಂಕಿ ಹೊತ್ತಿಸುವಂತಾಗಿತ್ತು. ಗಂಗಾ ಸ್ನಾನದಿಂದ ದೇಶದ ಬಡತನ ದೂರವಾಗುತ್ತಾ, ಬಡವರ ಹೊಟ್ಟೆ ತುಂಬುತ್ತಾ ಎಂದು ಟೀಕೆ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕಿಸುವ ಭರದಲ್ಲಿ ಖರ್ಗೆ ಬಾಯಲ್ಲಿ ಅಳತೆ ಮೀರಿತ ಮಾತು ಹೊರಗೆ ಬಂದಿತ್ತು. ಆದರೆ, ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆ ಒಂದು ಮಾತು ಕಾಂಗ್ರೆಸ್‌ ಪಕ್ಷಕ್ಕೆ ಆಪತ್ತು ಆಗುವ ಸನ್ನಿವೇಶನ ನಿರ್ಮಾಣ ಆಗಲಿದೆ. ಖರ್ಗೆ ಹೊತ್ತಿಸಿದ ಕುಂಭ ಕಿಚ್ಚಿನಲ್ಲಿ ರಾಜಕೀಯ ಜ್ವಾಲೆ ಧಗ ಧಗ ಉರಿಯುತ್ತಿದೆ. ಇದೇ ಸಂದರ್ಭದಲ್ಲಿ ಕುಂಭ ಮೇಳದಿಂದ ಸಾವಿರ ಕೋಟಿಗಳ ಲೆಕ್ಕದಲ್ಲಿ ಖರ್ಚು, ಲಕ್ಷ ಕೋಟಿಗಳ ಲೆಕ್ಕದಲ್ಲಿ ಆದಾಯ ಬರುತ್ತಿದೆ ಎನ್ನುವುದು ಇದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಪ್ರಯಾಗ್'ರಾಜ್'ನಲ್ಲಿ ನಡೀತಾ ಇರೋ ಮಹಾಕುಂಭ ಮೇಳದ ಒಟ್ಟು ಬಜೆಟ್ 7,500 ಕೋಟಿ ರೂಪಾಯಿ. ಅದರಲ್ಲಿ ಉಫತ್ತರ ಪ್ರದೇಶ ಸರ್ಕಾರದ ಪಾಲು 5,400 ಕೋಟಿ ರೂಪಾಯಿ, ಕೇಂದ್ರ ಸರ್ಕಾರದ ಪಾಲು 2,100 ಕೋಟಿ ರೂಪಾಯಿ ಇದೆ. ಮಹಾಕುಂಭ ಮೇಳದಿಂದ ಬರಲಿರುವ ಅಂದಾಜು ಆದಾಯ 2ರಿಂದ 4 ಲಕ್ಷ ಕೋಟಿ ರೂಪಾಯಿ ಆಗಿದೆ. ಒಟ್ಟು 45 ದಿನಗಳ ಮಹಾಕುಂಭಮೇಳಕ್ಕೆ ಸರಿ ಸುಮಾರು 40 ಕೋಟಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆಯಿದೆ. CAIT ಅಂದ್ರೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದತ್ತಾಂಶದ ಪ್ರಕಾರ ಶೇ.80ರಷ್ಟು ಪ್ರವಾಸಿಗರು ತಲಾ ₹5,000 ಖರ್ಚು ಮಾಡಲಿದ್ದಾರೆ ಎಂದು ಅಂದಾಜಿಸಿದೆ. ಈ ಲೆಕ್ಕದ ಪ್ರಕಾರ ಮಹಾಕುಂಭ ಮೇಳದಲ್ಲಿ ನಡೆಯಲಿರುವ ಒಟ್ಟು ವ್ಯವಹಾರ ಮತ್ತು ಆದಾಯ ₹ 2 ಲಕ್ಷ ಕೋಟಿ ದಾಟಲಿದೆ. ಒಬ್ಬ ಪ್ರವಾಸಿಗ ₹10 ಸಾವಿರದಂತೆ ಖರ್ಚು ಮಾಡಿದರೆ ಸುಮಾರು 4 ಲಕ್ಷ ಕೋಟಿ ಆದಾಯದ ನಿರೀಕ್ಷೆಯಿದೆ ಎನ್ನುತ್ತದೆ ಅಂದ್ರೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ ದತ್ತಾಂಶ ವರದಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more