ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ  ಆಯ್ಕೆ ಯಾಕೆ.?

ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ ಆಯ್ಕೆ ಯಾಕೆ.?

Published : Jun 23, 2022, 03:13 PM ISTUpdated : Jun 23, 2022, 03:18 PM IST

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. 

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ (Presidential Candidate) ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. ಸಂತಾಲ್‌ ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ (Draupadi Murmu) ಬಡಕುಟುಂಬದಲ್ಲಿ ಹುಟ್ಟಿ, ಅತ್ಯಂತ ಕಷ್ಟದಲ್ಲೇ ಶಿಕ್ಷಣ ಪೂರೈಸಿದ್ದರು. ಬಳಿಕ ರೈರಂಗಪುರದ ಅರಬಿಂದೋ ಶಿಕ್ಷಣ ಸಂಸ್ಥೆಯಲ್ಲಿ ವೇತನ ಪಡೆಯದೇ ಮಕ್ಕಳಿಗೆ ಶಿಕ್ಷಣ ನೀಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಒಡಿಶಾದಲ್ಲಿ ಬಿಜೆಪಿ ಹಾಗೂ ಬಿಜು ಜನತಾದಳದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ದ್ರೌಪದಿ ವಾಣಿಜ್ಯ ಹಾಗೂ ಸಾರಿಗೆ ಸಚಿವಾಲಯದ ಸ್ವತಂತ್ರ್ಯ ಉಸ್ತುವಾರಿ ರಾಜ್ಯ ಸಚಿವೆಯಾಗಿ, ನಂತರ ಮೀನುಗಾರಿಕೆ, ಪ್ರಾಣಿ ಸಂಪನ್ಮೂಲ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. 2000- 2004ರ ಅವಧಿಯಲ್ಲಿ ರೈರಂಗಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದರು. ಬಳಿಕ ಜಾರ್ಖಂಡದ 9ನೇ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ದಾರೆ.  

‘ದ್ರೌಪದಿ ಅವರು ಆದಿವಾಸಿ ಮಹಿಳೆಯಾಗಿದ್ದಾರೆ. ಹೀಗಾಗಿ ಆದಿವಾಸಿ ಮತಗಳು ಹೆಚ್ಚಿರುವ ಜಾರ್ಖಂಡ್‌, ಒಡಿಶಾ, ಮಹಾರಾಷ್ಟ್ರ, ಛತ್ತೀಸ್‌ಗಢ, ಈಶಾನ್ಯ- ಮೊದಲಾದ ರಾಜ್ಯಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಬಿಜೆಪಿಯ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಮಂತ್ರದ ಭಾಗವೂ ಇದು ಹೌದು. ಅದರಲ್ಲೂ, ಒಡಿಶಾದಲ್ಲಿ ಕಾಂಗ್ರೆಸ್ಸನ್ನು ಬದಿಗೆ ಸರಿಸಿರುವ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಮಹದೋದ್ದೇಶ ಹೊಂದಿದೆ. ಹೀಗಾಗಿ ಒಡಿಶಾ ಚುನಾವಣೆ ಮೇಲೆ ದ್ರೌಪದಿ ಆಯ್ಕೆ ಬಿಜೆಪಿಗೆ ನೆರವಾಗಲಿದೆ ಎಂದು ’ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more