ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ  ಆಯ್ಕೆ ಯಾಕೆ.?

ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ ಆಯ್ಕೆ ಯಾಕೆ.?

Published : Jun 23, 2022, 03:13 PM ISTUpdated : Jun 23, 2022, 03:18 PM IST

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. 

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ (Presidential Candidate) ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. ಸಂತಾಲ್‌ ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ (Draupadi Murmu) ಬಡಕುಟುಂಬದಲ್ಲಿ ಹುಟ್ಟಿ, ಅತ್ಯಂತ ಕಷ್ಟದಲ್ಲೇ ಶಿಕ್ಷಣ ಪೂರೈಸಿದ್ದರು. ಬಳಿಕ ರೈರಂಗಪುರದ ಅರಬಿಂದೋ ಶಿಕ್ಷಣ ಸಂಸ್ಥೆಯಲ್ಲಿ ವೇತನ ಪಡೆಯದೇ ಮಕ್ಕಳಿಗೆ ಶಿಕ್ಷಣ ನೀಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಒಡಿಶಾದಲ್ಲಿ ಬಿಜೆಪಿ ಹಾಗೂ ಬಿಜು ಜನತಾದಳದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ದ್ರೌಪದಿ ವಾಣಿಜ್ಯ ಹಾಗೂ ಸಾರಿಗೆ ಸಚಿವಾಲಯದ ಸ್ವತಂತ್ರ್ಯ ಉಸ್ತುವಾರಿ ರಾಜ್ಯ ಸಚಿವೆಯಾಗಿ, ನಂತರ ಮೀನುಗಾರಿಕೆ, ಪ್ರಾಣಿ ಸಂಪನ್ಮೂಲ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. 2000- 2004ರ ಅವಧಿಯಲ್ಲಿ ರೈರಂಗಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದರು. ಬಳಿಕ ಜಾರ್ಖಂಡದ 9ನೇ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ದಾರೆ.  

‘ದ್ರೌಪದಿ ಅವರು ಆದಿವಾಸಿ ಮಹಿಳೆಯಾಗಿದ್ದಾರೆ. ಹೀಗಾಗಿ ಆದಿವಾಸಿ ಮತಗಳು ಹೆಚ್ಚಿರುವ ಜಾರ್ಖಂಡ್‌, ಒಡಿಶಾ, ಮಹಾರಾಷ್ಟ್ರ, ಛತ್ತೀಸ್‌ಗಢ, ಈಶಾನ್ಯ- ಮೊದಲಾದ ರಾಜ್ಯಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಬಿಜೆಪಿಯ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಮಂತ್ರದ ಭಾಗವೂ ಇದು ಹೌದು. ಅದರಲ್ಲೂ, ಒಡಿಶಾದಲ್ಲಿ ಕಾಂಗ್ರೆಸ್ಸನ್ನು ಬದಿಗೆ ಸರಿಸಿರುವ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಮಹದೋದ್ದೇಶ ಹೊಂದಿದೆ. ಹೀಗಾಗಿ ಒಡಿಶಾ ಚುನಾವಣೆ ಮೇಲೆ ದ್ರೌಪದಿ ಆಯ್ಕೆ ಬಿಜೆಪಿಗೆ ನೆರವಾಗಲಿದೆ ಎಂದು ’ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more