ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ  ಆಯ್ಕೆ ಯಾಕೆ.?

ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ ಆಯ್ಕೆ ಯಾಕೆ.?

Published : Jun 23, 2022, 03:13 PM ISTUpdated : Jun 23, 2022, 03:18 PM IST

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. 

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ (Presidential Candidate) ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. ಸಂತಾಲ್‌ ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ (Draupadi Murmu) ಬಡಕುಟುಂಬದಲ್ಲಿ ಹುಟ್ಟಿ, ಅತ್ಯಂತ ಕಷ್ಟದಲ್ಲೇ ಶಿಕ್ಷಣ ಪೂರೈಸಿದ್ದರು. ಬಳಿಕ ರೈರಂಗಪುರದ ಅರಬಿಂದೋ ಶಿಕ್ಷಣ ಸಂಸ್ಥೆಯಲ್ಲಿ ವೇತನ ಪಡೆಯದೇ ಮಕ್ಕಳಿಗೆ ಶಿಕ್ಷಣ ನೀಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಒಡಿಶಾದಲ್ಲಿ ಬಿಜೆಪಿ ಹಾಗೂ ಬಿಜು ಜನತಾದಳದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ದ್ರೌಪದಿ ವಾಣಿಜ್ಯ ಹಾಗೂ ಸಾರಿಗೆ ಸಚಿವಾಲಯದ ಸ್ವತಂತ್ರ್ಯ ಉಸ್ತುವಾರಿ ರಾಜ್ಯ ಸಚಿವೆಯಾಗಿ, ನಂತರ ಮೀನುಗಾರಿಕೆ, ಪ್ರಾಣಿ ಸಂಪನ್ಮೂಲ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. 2000- 2004ರ ಅವಧಿಯಲ್ಲಿ ರೈರಂಗಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದರು. ಬಳಿಕ ಜಾರ್ಖಂಡದ 9ನೇ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ದಾರೆ.  

‘ದ್ರೌಪದಿ ಅವರು ಆದಿವಾಸಿ ಮಹಿಳೆಯಾಗಿದ್ದಾರೆ. ಹೀಗಾಗಿ ಆದಿವಾಸಿ ಮತಗಳು ಹೆಚ್ಚಿರುವ ಜಾರ್ಖಂಡ್‌, ಒಡಿಶಾ, ಮಹಾರಾಷ್ಟ್ರ, ಛತ್ತೀಸ್‌ಗಢ, ಈಶಾನ್ಯ- ಮೊದಲಾದ ರಾಜ್ಯಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಬಿಜೆಪಿಯ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಮಂತ್ರದ ಭಾಗವೂ ಇದು ಹೌದು. ಅದರಲ್ಲೂ, ಒಡಿಶಾದಲ್ಲಿ ಕಾಂಗ್ರೆಸ್ಸನ್ನು ಬದಿಗೆ ಸರಿಸಿರುವ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಮಹದೋದ್ದೇಶ ಹೊಂದಿದೆ. ಹೀಗಾಗಿ ಒಡಿಶಾ ಚುನಾವಣೆ ಮೇಲೆ ದ್ರೌಪದಿ ಆಯ್ಕೆ ಬಿಜೆಪಿಗೆ ನೆರವಾಗಲಿದೆ ಎಂದು ’ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more