ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ  ಆಯ್ಕೆ ಯಾಕೆ.?

ರಾಷ್ಟ್ರಪತಿ ಅಭ್ಯರ್ಥಿ: ಯಾರು ಈ ದ್ರೌಪದಿ ಮುರ್ಮು..? ಇವರೇ ಮೋದಿ ಆಯ್ಕೆ ಯಾಕೆ.?

Published : Jun 23, 2022, 03:13 PM ISTUpdated : Jun 23, 2022, 03:18 PM IST

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. 

ರಾಷ್ಟ್ರಪತಿ ಹಾಗೂ ಇತರ ಸಾಂವಿಧಾನಿಕ ಹುದ್ದೆಗಳ ಆಯ್ಕೆಯಲ್ಲಿ ಸದಾ ಅಚ್ಚರಿ ಮೂಡಿಸುವ ಬಿಜೆಪಿ, ಇದೇ ಮೊದಲ ಬಾರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ (Presidential Candidate) ಬುಡಕಟ್ಟು ಮಹಿಳೆಯೊಬ್ಬರನ್ನು ಕಣಕ್ಕಿಳಿಸಿದೆ. ಸಂತಾಲ್‌ ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ (Draupadi Murmu) ಬಡಕುಟುಂಬದಲ್ಲಿ ಹುಟ್ಟಿ, ಅತ್ಯಂತ ಕಷ್ಟದಲ್ಲೇ ಶಿಕ್ಷಣ ಪೂರೈಸಿದ್ದರು. ಬಳಿಕ ರೈರಂಗಪುರದ ಅರಬಿಂದೋ ಶಿಕ್ಷಣ ಸಂಸ್ಥೆಯಲ್ಲಿ ವೇತನ ಪಡೆಯದೇ ಮಕ್ಕಳಿಗೆ ಶಿಕ್ಷಣ ನೀಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಒಡಿಶಾದಲ್ಲಿ ಬಿಜೆಪಿ ಹಾಗೂ ಬಿಜು ಜನತಾದಳದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ, ದ್ರೌಪದಿ ವಾಣಿಜ್ಯ ಹಾಗೂ ಸಾರಿಗೆ ಸಚಿವಾಲಯದ ಸ್ವತಂತ್ರ್ಯ ಉಸ್ತುವಾರಿ ರಾಜ್ಯ ಸಚಿವೆಯಾಗಿ, ನಂತರ ಮೀನುಗಾರಿಕೆ, ಪ್ರಾಣಿ ಸಂಪನ್ಮೂಲ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. 2000- 2004ರ ಅವಧಿಯಲ್ಲಿ ರೈರಂಗಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದರು. ಬಳಿಕ ಜಾರ್ಖಂಡದ 9ನೇ ರಾಜ್ಯಪಾಲೆಯಾಗಿ ಕಾರ್ಯನಿರ್ವಹಿಸಿದ್ದಾರೆ.  

‘ದ್ರೌಪದಿ ಅವರು ಆದಿವಾಸಿ ಮಹಿಳೆಯಾಗಿದ್ದಾರೆ. ಹೀಗಾಗಿ ಆದಿವಾಸಿ ಮತಗಳು ಹೆಚ್ಚಿರುವ ಜಾರ್ಖಂಡ್‌, ಒಡಿಶಾ, ಮಹಾರಾಷ್ಟ್ರ, ಛತ್ತೀಸ್‌ಗಢ, ಈಶಾನ್ಯ- ಮೊದಲಾದ ರಾಜ್ಯಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಬಿಜೆಪಿಯ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಮಂತ್ರದ ಭಾಗವೂ ಇದು ಹೌದು. ಅದರಲ್ಲೂ, ಒಡಿಶಾದಲ್ಲಿ ಕಾಂಗ್ರೆಸ್ಸನ್ನು ಬದಿಗೆ ಸರಿಸಿರುವ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಮಹದೋದ್ದೇಶ ಹೊಂದಿದೆ. ಹೀಗಾಗಿ ಒಡಿಶಾ ಚುನಾವಣೆ ಮೇಲೆ ದ್ರೌಪದಿ ಆಯ್ಕೆ ಬಿಜೆಪಿಗೆ ನೆರವಾಗಲಿದೆ ಎಂದು ’ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more