Farm  Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Farm Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Suvarna News   | Asianet News
Published : Nov 23, 2021, 11:22 AM ISTUpdated : Nov 23, 2021, 11:31 AM IST

*ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ: ಸಿ- ವೋಟರ್‌ ಜನಮತ
*ಮೋದಿ ಸರ್ಕಾರ ನಿಜಕ್ಕೂ ರೈತ ಪರ: ಶೇ.58 ಮಂದಿಯಿಂದ ಅಭಿಪ್ರಾಯ
*ಕೇಂದ್ರ ಸರ್ಕಾರ ಮತ್ತೆ ಕಾಯ್ದೆ ಜಾರಿಗೆ ತರಬೇಕು: ಶೇ.48 ಜನರ ಸಲಹೆ

ನವದೆಹಲಿ(ನ.23): ಪ್ರಧಾನಿ ನರೇಂದ್ರ ಮೋದಿ (Narendra Modi) ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು  ದಿಢೀರನೆ ಹಿಂಪಡೆದಿದ್ದರಿಂದ (Farm laws repealed) ಅವರ ವರ್ಚಸ್ಸಿಗೆ ಕೊಂಚ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಗಳು ಸುಳ್ಳು ಎಂದು ಸಮೀಕ್ಷೆಯೊಂದು (Survey) ಹೇಳಿದೆ. ನರೇಂದ್ರ ಮೋದಿ ಅವರು ರೈತಪರ ಪ್ರಧಾನಿ. ಕೃಷಿ ಕಾಯ್ದೆಯನ್ನು ಹಿಂಪಡೆದ ಅವರ ನಿರ್ಧಾರ ಸೂಕ್ತವಾಗಿಯೇ ಇದೆ ಎಂಬುದು ಬಹುತೇಕ ಮಂದಿಯ ಅಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ, ಮೋದಿ ಸರ್ಕಾರ ರೈತಪರ : ಸಮಿಕ್ಷೇ!

ನ.19ರಂದು ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆವ ಘೋಷಣೆ ಮಾಡಿದ ಕೆಲವೇ ತಾಸಿನ ಬೆನ್ನಲ್ಲೇ ಸಿ-ವೋಟರ್‌ ಸಂಸ್ಥೆ ದೇಶಾದ್ಯಂತ ಹಠಾತ್‌ ಸಮೀಕ್ಷೆಯೊಂದನ್ನು ನಡೆಸಿದೆ. ಅದರಲ್ಲಿ ಭಾಗಿಯಾದ ಶೇ.52 ಮಂದಿಯ ಪ್ರಕಾರ, ಕಾಯ್ದೆ ಹಿಂಪಡೆದ ಮೋದಿ ನಿರ್ಧಾರ ಸರಿಯಾಗಿಯೇ ಇದೆ. ಮತ್ತೊಂದೆಡೆ ಮೋದಿ ಸರ್ಕಾರ ರೈತಪರವಾಗಿದೆ ಎಂದು ಶೇ.58.6ರಷ್ಟುಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲಕರವೇ ಆಗಿದ್ದವು ಎಂದು ಶೇ.50ಕ್ಕಿಂತ ಅಧಿಕ ಜನರು ಹೇಳಿದ್ದರೆ, ಶೇ.30.6ರಷ್ಟುಮಂದಿ ಮಾತ್ರ ತದ್ವಿರುದ್ಧ ಅಭಿಪ್ರಾಯ ತಿಳಿಸಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more