Farm  Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Farm Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Suvarna News   | Asianet News
Published : Nov 23, 2021, 11:22 AM ISTUpdated : Nov 23, 2021, 11:31 AM IST

*ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ: ಸಿ- ವೋಟರ್‌ ಜನಮತ
*ಮೋದಿ ಸರ್ಕಾರ ನಿಜಕ್ಕೂ ರೈತ ಪರ: ಶೇ.58 ಮಂದಿಯಿಂದ ಅಭಿಪ್ರಾಯ
*ಕೇಂದ್ರ ಸರ್ಕಾರ ಮತ್ತೆ ಕಾಯ್ದೆ ಜಾರಿಗೆ ತರಬೇಕು: ಶೇ.48 ಜನರ ಸಲಹೆ

ನವದೆಹಲಿ(ನ.23): ಪ್ರಧಾನಿ ನರೇಂದ್ರ ಮೋದಿ (Narendra Modi) ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು  ದಿಢೀರನೆ ಹಿಂಪಡೆದಿದ್ದರಿಂದ (Farm laws repealed) ಅವರ ವರ್ಚಸ್ಸಿಗೆ ಕೊಂಚ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಗಳು ಸುಳ್ಳು ಎಂದು ಸಮೀಕ್ಷೆಯೊಂದು (Survey) ಹೇಳಿದೆ. ನರೇಂದ್ರ ಮೋದಿ ಅವರು ರೈತಪರ ಪ್ರಧಾನಿ. ಕೃಷಿ ಕಾಯ್ದೆಯನ್ನು ಹಿಂಪಡೆದ ಅವರ ನಿರ್ಧಾರ ಸೂಕ್ತವಾಗಿಯೇ ಇದೆ ಎಂಬುದು ಬಹುತೇಕ ಮಂದಿಯ ಅಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ, ಮೋದಿ ಸರ್ಕಾರ ರೈತಪರ : ಸಮಿಕ್ಷೇ!

ನ.19ರಂದು ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆವ ಘೋಷಣೆ ಮಾಡಿದ ಕೆಲವೇ ತಾಸಿನ ಬೆನ್ನಲ್ಲೇ ಸಿ-ವೋಟರ್‌ ಸಂಸ್ಥೆ ದೇಶಾದ್ಯಂತ ಹಠಾತ್‌ ಸಮೀಕ್ಷೆಯೊಂದನ್ನು ನಡೆಸಿದೆ. ಅದರಲ್ಲಿ ಭಾಗಿಯಾದ ಶೇ.52 ಮಂದಿಯ ಪ್ರಕಾರ, ಕಾಯ್ದೆ ಹಿಂಪಡೆದ ಮೋದಿ ನಿರ್ಧಾರ ಸರಿಯಾಗಿಯೇ ಇದೆ. ಮತ್ತೊಂದೆಡೆ ಮೋದಿ ಸರ್ಕಾರ ರೈತಪರವಾಗಿದೆ ಎಂದು ಶೇ.58.6ರಷ್ಟುಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲಕರವೇ ಆಗಿದ್ದವು ಎಂದು ಶೇ.50ಕ್ಕಿಂತ ಅಧಿಕ ಜನರು ಹೇಳಿದ್ದರೆ, ಶೇ.30.6ರಷ್ಟುಮಂದಿ ಮಾತ್ರ ತದ್ವಿರುದ್ಧ ಅಭಿಪ್ರಾಯ ತಿಳಿಸಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more