News Hour: ನಾಳೆ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ!

News Hour: ನಾಳೆ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ!

Published : Dec 29, 2023, 11:09 PM IST

₹ 11,100 ಕೋಟಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುಂಚಿತವಾಗಿ ಅಯೋಧ್ಯೆಯನ್ನು ಹಿಂದು ಸಂಸ್ಕೃತಿಗೆ ತಕ್ಕಂತೆ ಅಲಂಕರಿಸಲಾಗಿದೆ.
 

ನವದೆಹಲಿ (ಡಿ.29): ನಾಳೆ ಐತಿಹಾಸಿಕ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಯೋಧ್ಯೆ ಒಂದರಲ್ಲೇ ಬರೋಬ್ಬರಿ ₹11,100  ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಾಳೆ ನಡೆಯಲಿದೆ. ಜೊತೆಗೆ ಉತ್ತರ ಪ್ರದೇಶದ ವಿವಿಧೆಡೆ 15,700 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 

ಮಂದಿರ ಲೋಕಾರ್ಪಣೆ ದಿನ ಸಮೀಪಿಸುತ್ತಿದ್ದಂತೆ ಅಯೋಧ್ಯೆ ಸಂಪೂರ್ಣ ಕೇಸರಿ ಮಯವಾಗಿದೆ. ನಾಳೆ ಪ್ರಧಾನಿ ಮೋದಿ ನೇರವಾಗಿ ಹೊಸ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಮೋದಿ ಅವರ ವಿಮಾನ ಲ್ಯಾಂಡ್ ಆಗುವ ಮೂಲಕ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಚಾಲನೆ ಸಿಗಲಿದೆ. ಬಳಿಕ ಸಾವಿರಾರು ಕೋಟಿ ವೆಚ್ಚದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಹೊಸ ಯೋಜನೆಗಳಿಗೆ ಶಂಕು ಸ್ಥಾಪನೆ ನಡೆಯಲಿದೆ.

ಅಯೋಧ್ಯೆಯಲ್ಲಿ 11 ಸಾವಿರ ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ!

ಮೋದಿ, 240 ಕೋಟಿ ವೆಚ್ಚದ ಅಯೋಧ್ಯೆ ಧಾಮ್ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. 1,450 ಕೋಟಿ ವೆಚ್ಚದ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.. 2 ಅಮೃತ್ ಭಾರತ್ ಎಕ್ಸ್‌ಪ್ರೆಸ್, 6 ವಂದೇ ಭಾರತ್ಗೆ ಸಹ ಮೋದಿ ಗ್ರೀನ್ಸಿಗ್ನಲ್ ನೀಡಲಿದ್ದು.. ಅಯೋಧ್ಯೆಯಲ್ಲಿ 2,180 ಕೋಟಿ ವೆಚ್ಚದ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಸಹ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.. ಒಟ್ಟು 29 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more