News Hour: ನಾಳೆ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ!

News Hour: ನಾಳೆ ರಾಮನೂರು ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ!

Published : Dec 29, 2023, 11:09 PM IST

₹ 11,100 ಕೋಟಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುಂಚಿತವಾಗಿ ಅಯೋಧ್ಯೆಯನ್ನು ಹಿಂದು ಸಂಸ್ಕೃತಿಗೆ ತಕ್ಕಂತೆ ಅಲಂಕರಿಸಲಾಗಿದೆ.
 

ನವದೆಹಲಿ (ಡಿ.29): ನಾಳೆ ಐತಿಹಾಸಿಕ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಯೋಧ್ಯೆ ಒಂದರಲ್ಲೇ ಬರೋಬ್ಬರಿ ₹11,100  ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಾಳೆ ನಡೆಯಲಿದೆ. ಜೊತೆಗೆ ಉತ್ತರ ಪ್ರದೇಶದ ವಿವಿಧೆಡೆ 15,700 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 

ಮಂದಿರ ಲೋಕಾರ್ಪಣೆ ದಿನ ಸಮೀಪಿಸುತ್ತಿದ್ದಂತೆ ಅಯೋಧ್ಯೆ ಸಂಪೂರ್ಣ ಕೇಸರಿ ಮಯವಾಗಿದೆ. ನಾಳೆ ಪ್ರಧಾನಿ ಮೋದಿ ನೇರವಾಗಿ ಹೊಸ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಮೋದಿ ಅವರ ವಿಮಾನ ಲ್ಯಾಂಡ್ ಆಗುವ ಮೂಲಕ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಚಾಲನೆ ಸಿಗಲಿದೆ. ಬಳಿಕ ಸಾವಿರಾರು ಕೋಟಿ ವೆಚ್ಚದ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಹೊಸ ಯೋಜನೆಗಳಿಗೆ ಶಂಕು ಸ್ಥಾಪನೆ ನಡೆಯಲಿದೆ.

ಅಯೋಧ್ಯೆಯಲ್ಲಿ 11 ಸಾವಿರ ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ!

ಮೋದಿ, 240 ಕೋಟಿ ವೆಚ್ಚದ ಅಯೋಧ್ಯೆ ಧಾಮ್ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. 1,450 ಕೋಟಿ ವೆಚ್ಚದ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.. 2 ಅಮೃತ್ ಭಾರತ್ ಎಕ್ಸ್‌ಪ್ರೆಸ್, 6 ವಂದೇ ಭಾರತ್ಗೆ ಸಹ ಮೋದಿ ಗ್ರೀನ್ಸಿಗ್ನಲ್ ನೀಡಲಿದ್ದು.. ಅಯೋಧ್ಯೆಯಲ್ಲಿ 2,180 ಕೋಟಿ ವೆಚ್ಚದ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಸಹ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.. ಒಟ್ಟು 29 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more