ಕಳೆದೋಗಿದೆ ಪುರಿ ಜಗನ್ನಾಥ ರತ್ನಭಂಡಾರ ಕೀಲಿ ಕೈ.. ಆದ್ರೂ ಓಪನ್‌ ಆಗುತ್ತೆ ಬಾಗಿಲು ಹೇಗೆ ಗೊತ್ತಾ ?

ಕಳೆದೋಗಿದೆ ಪುರಿ ಜಗನ್ನಾಥ ರತ್ನಭಂಡಾರ ಕೀಲಿ ಕೈ.. ಆದ್ರೂ ಓಪನ್‌ ಆಗುತ್ತೆ ಬಾಗಿಲು ಹೇಗೆ ಗೊತ್ತಾ ?

Published : Jul 14, 2024, 08:48 AM IST

ಸಾಕಷ್ಟು ರಹಸ್ಯಗಳನ್ನು ತನ್ನಲ್ಲಿ ಅಡಗಿಸಿಕೊಂಡಿರೋ ಪುರಿ ಜಗನ್ನಾಥ ದೇವಾಲಯದ ರತ್ನಭಂಡಾರವನ್ನು ಇಂದು ಓಪನ್‌ ಮಾಡಲಾಗುತ್ತಿದೆ.
 

46 ವರ್ಷಗಳ ನಂತರ ಪುರಿ ಜಗನ್ನಾಥ ರತ್ನಭಂಡಾರ (Jagannath puri temple) ಓಪನ್‌ಗೆ ಕ್ಷಣಗಣನೆ ಶುರುವಾಗಿದೆ. ಸಾಕಷ್ಟು ರಹಸ್ಯಗಳನ್ನು ತನ್ನಲ್ಲಿ ಅಡಗಿಸಿಕೊಂಡಿರೋ ಪುರಿ ಜಗನ್ನಾಥ ದೇವಾಲಯ ವಿಸ್ಮಯಗಳಿಗೆ ಸಾಕ್ಷಿಯಾಗಿರೋದು ಅಂತೂ ಸತ್ಯ. ಅಷ್ಟೇ ಅಲ್ಲ ಊಹೆಗೂ ನಿಲುಕದಷ್ಟು ಧನಕನಕ, ಸಂಪತ್ತುಗಳು ಈ ದೇವಸ್ಥಾನದಲ್ಲಿದೆ. ಇಂಥಾ ದೇಗುಲದಲ್ಲಿನ ರತ್ನ ಭಂಡಾರದ(Ratna bhandar) ಬಾಗಿಲು ತೆರೆಯುತ್ತಿರೋದು ಭಾರೀ ಸುದ್ದಿಯಾಗ್ತಿದೆ. 4 ದಶಕದ ಬಳಿಕ ಅಂದರೆ ಬರೋಬ್ಬರಿ 46 ವರ್ಷಗಳ ಬಳಿಕ ನಕಲಿ ಕೀ ಬಳಸಿ ರತ್ನಭಂಡಾರದ ಕೋಣೆ ಬಾಗಿಲು ತೆರೆಯಲು ಸಿದ್ಧತೆ ನಡೆದಿದೆ. ಇತ್ತೀಚಿಗೆ ಒಡಿಶಾದ ಈಗಿನ ಸಿಎಂ  ಮೋಹನ್ ಚರಣ್ ಮಾಜ್ಹಿ(Mohan Charan Majhi) ಉನ್ನತ ಮಟ್ಟದ ಸಮಿತಿ ರಚಿಸಿದ್ರು, ಇಂದು ಭಂಡಾರ ತೆರೆಯಲಾಗುತ್ತಿದ್ದು, ಈ ಭಂಡಾರದಲ್ಲಿ ಅಮೂಲ್ಯ ಲೋಹಗಳು, ಅತೀ ಪುರಾತನ ಆಭರಣಗಳಿವೆ. ಕೋಟಿ ಕೋಟಿ ಬೆಲೆ ಬಾಳುವ ಚಿನ್ನ, ಬೆಳ್ಳಿ, ವಜ್ರ ವೈಡೂರ್ಯಗಳಿವೆ. ಇವುಗಳೆಲ್ಲವನ್ನೂ ಸಮಿತಿ ಲೆಕ್ಕ ಹಾಕಲಿದೆ. ರಾಜ್ಯ ಸರ್ಕಾರ ರಚಿಸಿರುವ 16 ಸದಸ್ಯರ ಉನ್ನತ ಮಟ್ಟದ ಸಮಿತಿಯು  ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಮೊದಲು ಜಗನ್ನಾಥನಿಗೆ ಪೂಜೆ ಮಾಡಿ ಭಂಡಾರವನ್ನು ಓಪನ್ ಮಾಡಲಿದೆ.  

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವಾರಪೂರ್ತಿ ಸಂಗಾತಿ-ಸಾಲ ವಿಚಾರದಲ್ಲಿ ಅನಾನುಕೂಲವಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?