ಕಳೆದೋಗಿದೆ ಪುರಿ ಜಗನ್ನಾಥ ರತ್ನಭಂಡಾರ ಕೀಲಿ ಕೈ.. ಆದ್ರೂ ಓಪನ್‌ ಆಗುತ್ತೆ ಬಾಗಿಲು ಹೇಗೆ ಗೊತ್ತಾ ?

ಕಳೆದೋಗಿದೆ ಪುರಿ ಜಗನ್ನಾಥ ರತ್ನಭಂಡಾರ ಕೀಲಿ ಕೈ.. ಆದ್ರೂ ಓಪನ್‌ ಆಗುತ್ತೆ ಬಾಗಿಲು ಹೇಗೆ ಗೊತ್ತಾ ?

Published : Jul 14, 2024, 08:48 AM IST

ಸಾಕಷ್ಟು ರಹಸ್ಯಗಳನ್ನು ತನ್ನಲ್ಲಿ ಅಡಗಿಸಿಕೊಂಡಿರೋ ಪುರಿ ಜಗನ್ನಾಥ ದೇವಾಲಯದ ರತ್ನಭಂಡಾರವನ್ನು ಇಂದು ಓಪನ್‌ ಮಾಡಲಾಗುತ್ತಿದೆ.
 

46 ವರ್ಷಗಳ ನಂತರ ಪುರಿ ಜಗನ್ನಾಥ ರತ್ನಭಂಡಾರ (Jagannath puri temple) ಓಪನ್‌ಗೆ ಕ್ಷಣಗಣನೆ ಶುರುವಾಗಿದೆ. ಸಾಕಷ್ಟು ರಹಸ್ಯಗಳನ್ನು ತನ್ನಲ್ಲಿ ಅಡಗಿಸಿಕೊಂಡಿರೋ ಪುರಿ ಜಗನ್ನಾಥ ದೇವಾಲಯ ವಿಸ್ಮಯಗಳಿಗೆ ಸಾಕ್ಷಿಯಾಗಿರೋದು ಅಂತೂ ಸತ್ಯ. ಅಷ್ಟೇ ಅಲ್ಲ ಊಹೆಗೂ ನಿಲುಕದಷ್ಟು ಧನಕನಕ, ಸಂಪತ್ತುಗಳು ಈ ದೇವಸ್ಥಾನದಲ್ಲಿದೆ. ಇಂಥಾ ದೇಗುಲದಲ್ಲಿನ ರತ್ನ ಭಂಡಾರದ(Ratna bhandar) ಬಾಗಿಲು ತೆರೆಯುತ್ತಿರೋದು ಭಾರೀ ಸುದ್ದಿಯಾಗ್ತಿದೆ. 4 ದಶಕದ ಬಳಿಕ ಅಂದರೆ ಬರೋಬ್ಬರಿ 46 ವರ್ಷಗಳ ಬಳಿಕ ನಕಲಿ ಕೀ ಬಳಸಿ ರತ್ನಭಂಡಾರದ ಕೋಣೆ ಬಾಗಿಲು ತೆರೆಯಲು ಸಿದ್ಧತೆ ನಡೆದಿದೆ. ಇತ್ತೀಚಿಗೆ ಒಡಿಶಾದ ಈಗಿನ ಸಿಎಂ  ಮೋಹನ್ ಚರಣ್ ಮಾಜ್ಹಿ(Mohan Charan Majhi) ಉನ್ನತ ಮಟ್ಟದ ಸಮಿತಿ ರಚಿಸಿದ್ರು, ಇಂದು ಭಂಡಾರ ತೆರೆಯಲಾಗುತ್ತಿದ್ದು, ಈ ಭಂಡಾರದಲ್ಲಿ ಅಮೂಲ್ಯ ಲೋಹಗಳು, ಅತೀ ಪುರಾತನ ಆಭರಣಗಳಿವೆ. ಕೋಟಿ ಕೋಟಿ ಬೆಲೆ ಬಾಳುವ ಚಿನ್ನ, ಬೆಳ್ಳಿ, ವಜ್ರ ವೈಡೂರ್ಯಗಳಿವೆ. ಇವುಗಳೆಲ್ಲವನ್ನೂ ಸಮಿತಿ ಲೆಕ್ಕ ಹಾಕಲಿದೆ. ರಾಜ್ಯ ಸರ್ಕಾರ ರಚಿಸಿರುವ 16 ಸದಸ್ಯರ ಉನ್ನತ ಮಟ್ಟದ ಸಮಿತಿಯು  ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಮೊದಲು ಜಗನ್ನಾಥನಿಗೆ ಪೂಜೆ ಮಾಡಿ ಭಂಡಾರವನ್ನು ಓಪನ್ ಮಾಡಲಿದೆ.  

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವಾರಪೂರ್ತಿ ಸಂಗಾತಿ-ಸಾಲ ವಿಚಾರದಲ್ಲಿ ಅನಾನುಕೂಲವಿದ್ದು, ಪರಿಹಾರಕ್ಕೆ ಹೀಗೆ ಮಾಡಿ..

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!