News Hour: ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ನಾಯಕರ ಕಿಕ್‌ ಸ್ಟಾರ್ಟ್‌!

News Hour: ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ನಾಯಕರ ಕಿಕ್‌ ಸ್ಟಾರ್ಟ್‌!

Published : Dec 28, 2023, 11:40 PM IST

ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಕಿಕ್‌ ಸ್ಟಾರ್ಟ್‌ ಕೊಟ್ಟಿದೆ. ನಾಗ್ಪರದಲ್ಲಿ ನಾವು ತಯಾರಾಗಿದ್ದೆವೆ ಎಂದು ಕಹಳೆ ಮೊಳಗಿದೆ. ಸಂಸ್ಥಾಪನಾ ದಿನಾಚರಣೆ ಹೆಸರಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಮಾಡಿದೆ.
 

ಬೆಂಗಳೂರು (ಡಿ.28): ಕಾಂಗ್ರೆಸ್ ಪಕ್ಷ ಸ್ಥಾಪನೆಯಾಗಿ ಬರೋಬ್ಬರಿ 139 ವರ್ಷ. ಗುರುವಾರ ನಾಗ್ಪುರದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ಸಮಾವೇಶ ನಡೆಸಿ, 2024ರ ಲೋಕಸಭಾ ಸಮರಕ್ಕೆ ಕಹಳೆ ಮೊಳಗಿಸಿವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೋದಿ ಕಟ್ಟಿ ಹಾಕಲೇಬೇಕೆಂದು ಕಾಂಗ್ರೆಸ್ ಪ್ಲಾನ್ ಮಾಡ್ತಿದೆ. 

ಅದರ ಭಾಗವಾಗಿ ಭಾರತ ನ್ಯಾಯ ಯಾತ್ರೆಗೆ ನಿರ್ಧರಿಸಿದ್ದು, ಮಣಿಪುರದಿಂದ ಮುಂಬೈ ವರೆಗೆ ರಾಹುಲ್ ಹೆಜ್ಜೆ ಹಾಕಲಿದ್ದಾರೆ.  ಗುರುವಾರ ನಾಗ್ಪುರದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ‘ನಾವು ತಯಾರಾಗಿದ್ದೇವೆ’ ಎಂದು ಅದ್ಧೂರಿ ಸಮಾವೇಶ ನಡೆಸಿತು.

ಅಯೋಧ್ಯೆಯಲ್ಲಿ 11 ಸಾವಿರ ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ!

ನಾಗ್ಪುರದಲ್ಲಿ ನಡೆದ ಸಮಾವೇಶದಿಂದಾಗಿ ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಬಿಗ್ ಕಿಕ್‌ಸ್ಟಾರ್ಟ್‌ ಸಿಕ್ಕಂತಾಗಿದೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಬಳಿಕ ಖರ್ಗೆ ನಾಗ್ಪುರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಾಹುಲ್ ಗಾಂಧಿ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕ ಡಿಸಿಎಂ ಡಿಕೆಶಿ, ಹಿಮಾಚಲ ಸಿಎಂ ಸುಖದೇವ್ ಸಿಂಗ್ ಸೇರಿ ಅನೇಕ ನಾಯಕರು ಹಾಜರಿದ್ದರು.  ಇನ್ನು ಕರ್ನಾಟಕ ಕಾಂಗ್ರೆಸ್, ಸಂಸ್ಥಾಪನಾ ದಿನವೇ ಯಡವಟ್ಟು ಮಾಡಿಕೊಂಡಿದೆ. ಟ್ವಿಟರ್‌ ಖಾತೆಯಲ್ಲಿ ಶುಭ ಕೋರಿ ಹಾಕಿದ ಪೋಸ್ಟರ್ನಲ್ಲಿ ಖರ್ಗೆ ಫೋಟೋನೇ ಮಿಸ್ ಆಗಿತ್ತು. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more