ತುಘಲಕ್‌ ಲೇನ್‌ ಇನ್ಮುಂದೆ  ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

Published : Apr 22, 2023, 10:29 PM IST

ಕಳೆದ 19 ವರ್ಷಗಳಿಂದ ನವದೆಹಲಿಯ ತುಘಲಕ್‌ ಲೇನ್‌ ರಸ್ತೆಯ ವಿಳಾಸದ ಸರ್ಕಾರಿ ಬಂಗಲೆಯಲ್ಲಿದ್ದ ರಾಹುಲ್‌ ಗಾಂಧಿ, ಶನಿವಾರ ತಮ್ಮ ಸಾಮಾನು-ಸರಂಜಾಮುಗಳನ್ನು ಪ್ಯಾಕ್‌ ಮಾಡಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಮನೆಗೆ ಶಿಫ್ಟ್‌ ಆಗಿದ್ದಾರೆ.
 

ನವದೆಹಲಿ (ಏ.22): ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಭರದಲ್ಲಿ ಇಡೀ ಮೋದಿ ಜಾತಿಯವರನ್ನು ಟೀಕೆ ಮಾಡಿ ಕೋರ್ಟ್‌ನಿಂದ ಶಿಕ್ಷೆಗೆ ಒಳಗಾಗಿದ್ದ ರಾಹುಲ್‌ ಗಾಂಧಿ, ಅದೇ ಕಾರಣಕ್ಕೆ ತಮ್ಮ ಲೋಕಸಭಾ ಸದಸ್ಯತ್ವವನ್ನೂ ಕಳೆದುಕೊಂಡಿದ್ದರು. ಇದರ ಬೆನ್ನಲ್ಲಿಯೇ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್‌ ಕೂಡ ಜಾರಿ ಮಾಡಲಾಗಿತ್ತು.

ಈ ನೋಟಿಸ್‌ಗೆ ಒಂದು ತಿಂಗಳ ಕಾಲಾವಕಾಶ ಕೇಳಿದ್ದ ರಾಹುಲ್‌ ಗಾಂಧಿ, ಶನಿವಾರ ತುಘಲಕ್‌ ಲೇನ್‌ ರಸ್ತೆಯಲ್ಲಿದ್ದ ಸರ್ಕಾರಿ ಬಂಗಲೆಯನ್ನು ಅಧಿಕೃತವಾಗಿ ಖಾಲಿ ಮಾಡಿದ್ದಾರೆ. ಮನೆಯಲ್ಲಿದ್ದ ಸಾಮಾನು-ಸರಂಜಾಮುಗಳನ್ನು ಟ್ರಕ್‌ಗೆ ಹಾಕಿ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾನು ಸರ್ಕಾರದ ಸತ್ಯವನ್ನು ಬಯಲು ಮಾಡಿದ್ದಕ್ಕಾಗಿ ಈ ಬೆಲೆಯನ್ನು ತೆರುತ್ತಿದ್ದೇನೆ ಎಂದು ಹೇಳಿದ್ದಾರೆ.

 

ಇಂದು ಸರ್ಕಾರಿ ಬಂಗಲೆ ತೆರವು ಮಾಡಲಿರೋ ರಾಹುಲ್‌ ಗಾಂಧಿ: ಅಮ್ಮನ ಮನೆಗೆ ಶಿಫ್ಟ್‌ ಆಗ್ತಾರೆ ಕಾಂಗ್ರೆಸ್‌ ನಾಯಕ

"ಭಾರತದ ಜನರು 19 ವರ್ಷಗಳ ಕಾಲ ಈ ಮನೆಯನ್ನು ನನಗೆ ನೀಡಿದ್ದಾರೆ ಮತ್ತು ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಸತ್ಯವನ್ನು ಮಾತನಾಡಿದ್ದಕ್ಕೆ ಸಿಕ್ಕ ಬೆಲೆ ಮತ್ತು ಆ ಬೆಲೆಯನ್ನು ತೆರಲು ನಾನು ಸಿದ್ಧ" ಎಂದು ರಾಹುಲ್ ಹೇಳಿದರು. 10, ಜನಪಥ್‌ನಲ್ಲಿರುವ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕೆಲಕಾಲ ವಾಸ್ತವ್ಯ ಹೂಡಲಿದ್ದೇನೆ ಎಂದು ಇದೇ ವೇಳೆ ಹೇಳಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more