ತುಘಲಕ್‌ ಲೇನ್‌ ಇನ್ಮುಂದೆ  ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

Published : Apr 22, 2023, 10:29 PM IST

ಕಳೆದ 19 ವರ್ಷಗಳಿಂದ ನವದೆಹಲಿಯ ತುಘಲಕ್‌ ಲೇನ್‌ ರಸ್ತೆಯ ವಿಳಾಸದ ಸರ್ಕಾರಿ ಬಂಗಲೆಯಲ್ಲಿದ್ದ ರಾಹುಲ್‌ ಗಾಂಧಿ, ಶನಿವಾರ ತಮ್ಮ ಸಾಮಾನು-ಸರಂಜಾಮುಗಳನ್ನು ಪ್ಯಾಕ್‌ ಮಾಡಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಮನೆಗೆ ಶಿಫ್ಟ್‌ ಆಗಿದ್ದಾರೆ.
 

ನವದೆಹಲಿ (ಏ.22): ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಭರದಲ್ಲಿ ಇಡೀ ಮೋದಿ ಜಾತಿಯವರನ್ನು ಟೀಕೆ ಮಾಡಿ ಕೋರ್ಟ್‌ನಿಂದ ಶಿಕ್ಷೆಗೆ ಒಳಗಾಗಿದ್ದ ರಾಹುಲ್‌ ಗಾಂಧಿ, ಅದೇ ಕಾರಣಕ್ಕೆ ತಮ್ಮ ಲೋಕಸಭಾ ಸದಸ್ಯತ್ವವನ್ನೂ ಕಳೆದುಕೊಂಡಿದ್ದರು. ಇದರ ಬೆನ್ನಲ್ಲಿಯೇ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್‌ ಕೂಡ ಜಾರಿ ಮಾಡಲಾಗಿತ್ತು.

ಈ ನೋಟಿಸ್‌ಗೆ ಒಂದು ತಿಂಗಳ ಕಾಲಾವಕಾಶ ಕೇಳಿದ್ದ ರಾಹುಲ್‌ ಗಾಂಧಿ, ಶನಿವಾರ ತುಘಲಕ್‌ ಲೇನ್‌ ರಸ್ತೆಯಲ್ಲಿದ್ದ ಸರ್ಕಾರಿ ಬಂಗಲೆಯನ್ನು ಅಧಿಕೃತವಾಗಿ ಖಾಲಿ ಮಾಡಿದ್ದಾರೆ. ಮನೆಯಲ್ಲಿದ್ದ ಸಾಮಾನು-ಸರಂಜಾಮುಗಳನ್ನು ಟ್ರಕ್‌ಗೆ ಹಾಕಿ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾನು ಸರ್ಕಾರದ ಸತ್ಯವನ್ನು ಬಯಲು ಮಾಡಿದ್ದಕ್ಕಾಗಿ ಈ ಬೆಲೆಯನ್ನು ತೆರುತ್ತಿದ್ದೇನೆ ಎಂದು ಹೇಳಿದ್ದಾರೆ.

 

ಇಂದು ಸರ್ಕಾರಿ ಬಂಗಲೆ ತೆರವು ಮಾಡಲಿರೋ ರಾಹುಲ್‌ ಗಾಂಧಿ: ಅಮ್ಮನ ಮನೆಗೆ ಶಿಫ್ಟ್‌ ಆಗ್ತಾರೆ ಕಾಂಗ್ರೆಸ್‌ ನಾಯಕ

"ಭಾರತದ ಜನರು 19 ವರ್ಷಗಳ ಕಾಲ ಈ ಮನೆಯನ್ನು ನನಗೆ ನೀಡಿದ್ದಾರೆ ಮತ್ತು ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಸತ್ಯವನ್ನು ಮಾತನಾಡಿದ್ದಕ್ಕೆ ಸಿಕ್ಕ ಬೆಲೆ ಮತ್ತು ಆ ಬೆಲೆಯನ್ನು ತೆರಲು ನಾನು ಸಿದ್ಧ" ಎಂದು ರಾಹುಲ್ ಹೇಳಿದರು. 10, ಜನಪಥ್‌ನಲ್ಲಿರುವ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕೆಲಕಾಲ ವಾಸ್ತವ್ಯ ಹೂಡಲಿದ್ದೇನೆ ಎಂದು ಇದೇ ವೇಳೆ ಹೇಳಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more