ತುಘಲಕ್‌ ಲೇನ್‌ ಇನ್ಮುಂದೆ  ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

Published : Apr 22, 2023, 10:29 PM IST

ಕಳೆದ 19 ವರ್ಷಗಳಿಂದ ನವದೆಹಲಿಯ ತುಘಲಕ್‌ ಲೇನ್‌ ರಸ್ತೆಯ ವಿಳಾಸದ ಸರ್ಕಾರಿ ಬಂಗಲೆಯಲ್ಲಿದ್ದ ರಾಹುಲ್‌ ಗಾಂಧಿ, ಶನಿವಾರ ತಮ್ಮ ಸಾಮಾನು-ಸರಂಜಾಮುಗಳನ್ನು ಪ್ಯಾಕ್‌ ಮಾಡಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಮನೆಗೆ ಶಿಫ್ಟ್‌ ಆಗಿದ್ದಾರೆ.
 

ನವದೆಹಲಿ (ಏ.22): ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಭರದಲ್ಲಿ ಇಡೀ ಮೋದಿ ಜಾತಿಯವರನ್ನು ಟೀಕೆ ಮಾಡಿ ಕೋರ್ಟ್‌ನಿಂದ ಶಿಕ್ಷೆಗೆ ಒಳಗಾಗಿದ್ದ ರಾಹುಲ್‌ ಗಾಂಧಿ, ಅದೇ ಕಾರಣಕ್ಕೆ ತಮ್ಮ ಲೋಕಸಭಾ ಸದಸ್ಯತ್ವವನ್ನೂ ಕಳೆದುಕೊಂಡಿದ್ದರು. ಇದರ ಬೆನ್ನಲ್ಲಿಯೇ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್‌ ಕೂಡ ಜಾರಿ ಮಾಡಲಾಗಿತ್ತು.

ಈ ನೋಟಿಸ್‌ಗೆ ಒಂದು ತಿಂಗಳ ಕಾಲಾವಕಾಶ ಕೇಳಿದ್ದ ರಾಹುಲ್‌ ಗಾಂಧಿ, ಶನಿವಾರ ತುಘಲಕ್‌ ಲೇನ್‌ ರಸ್ತೆಯಲ್ಲಿದ್ದ ಸರ್ಕಾರಿ ಬಂಗಲೆಯನ್ನು ಅಧಿಕೃತವಾಗಿ ಖಾಲಿ ಮಾಡಿದ್ದಾರೆ. ಮನೆಯಲ್ಲಿದ್ದ ಸಾಮಾನು-ಸರಂಜಾಮುಗಳನ್ನು ಟ್ರಕ್‌ಗೆ ಹಾಕಿ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾನು ಸರ್ಕಾರದ ಸತ್ಯವನ್ನು ಬಯಲು ಮಾಡಿದ್ದಕ್ಕಾಗಿ ಈ ಬೆಲೆಯನ್ನು ತೆರುತ್ತಿದ್ದೇನೆ ಎಂದು ಹೇಳಿದ್ದಾರೆ.

 

ಇಂದು ಸರ್ಕಾರಿ ಬಂಗಲೆ ತೆರವು ಮಾಡಲಿರೋ ರಾಹುಲ್‌ ಗಾಂಧಿ: ಅಮ್ಮನ ಮನೆಗೆ ಶಿಫ್ಟ್‌ ಆಗ್ತಾರೆ ಕಾಂಗ್ರೆಸ್‌ ನಾಯಕ

"ಭಾರತದ ಜನರು 19 ವರ್ಷಗಳ ಕಾಲ ಈ ಮನೆಯನ್ನು ನನಗೆ ನೀಡಿದ್ದಾರೆ ಮತ್ತು ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಸತ್ಯವನ್ನು ಮಾತನಾಡಿದ್ದಕ್ಕೆ ಸಿಕ್ಕ ಬೆಲೆ ಮತ್ತು ಆ ಬೆಲೆಯನ್ನು ತೆರಲು ನಾನು ಸಿದ್ಧ" ಎಂದು ರಾಹುಲ್ ಹೇಳಿದರು. 10, ಜನಪಥ್‌ನಲ್ಲಿರುವ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕೆಲಕಾಲ ವಾಸ್ತವ್ಯ ಹೂಡಲಿದ್ದೇನೆ ಎಂದು ಇದೇ ವೇಳೆ ಹೇಳಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more