ತುಘಲಕ್‌ ಲೇನ್‌ ಇನ್ಮುಂದೆ  ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

ತುಘಲಕ್‌ ಲೇನ್‌ ಇನ್ಮುಂದೆ ರಾಹುಲ್‌ ಗಾಂಧಿ ವಿಳಾಸವಲ್ಲ, ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್‌ ನಾಯಕ!

Published : Apr 22, 2023, 10:29 PM IST

ಕಳೆದ 19 ವರ್ಷಗಳಿಂದ ನವದೆಹಲಿಯ ತುಘಲಕ್‌ ಲೇನ್‌ ರಸ್ತೆಯ ವಿಳಾಸದ ಸರ್ಕಾರಿ ಬಂಗಲೆಯಲ್ಲಿದ್ದ ರಾಹುಲ್‌ ಗಾಂಧಿ, ಶನಿವಾರ ತಮ್ಮ ಸಾಮಾನು-ಸರಂಜಾಮುಗಳನ್ನು ಪ್ಯಾಕ್‌ ಮಾಡಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಮನೆಗೆ ಶಿಫ್ಟ್‌ ಆಗಿದ್ದಾರೆ.
 

ನವದೆಹಲಿ (ಏ.22): ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಭರದಲ್ಲಿ ಇಡೀ ಮೋದಿ ಜಾತಿಯವರನ್ನು ಟೀಕೆ ಮಾಡಿ ಕೋರ್ಟ್‌ನಿಂದ ಶಿಕ್ಷೆಗೆ ಒಳಗಾಗಿದ್ದ ರಾಹುಲ್‌ ಗಾಂಧಿ, ಅದೇ ಕಾರಣಕ್ಕೆ ತಮ್ಮ ಲೋಕಸಭಾ ಸದಸ್ಯತ್ವವನ್ನೂ ಕಳೆದುಕೊಂಡಿದ್ದರು. ಇದರ ಬೆನ್ನಲ್ಲಿಯೇ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್‌ ಕೂಡ ಜಾರಿ ಮಾಡಲಾಗಿತ್ತು.

ಈ ನೋಟಿಸ್‌ಗೆ ಒಂದು ತಿಂಗಳ ಕಾಲಾವಕಾಶ ಕೇಳಿದ್ದ ರಾಹುಲ್‌ ಗಾಂಧಿ, ಶನಿವಾರ ತುಘಲಕ್‌ ಲೇನ್‌ ರಸ್ತೆಯಲ್ಲಿದ್ದ ಸರ್ಕಾರಿ ಬಂಗಲೆಯನ್ನು ಅಧಿಕೃತವಾಗಿ ಖಾಲಿ ಮಾಡಿದ್ದಾರೆ. ಮನೆಯಲ್ಲಿದ್ದ ಸಾಮಾನು-ಸರಂಜಾಮುಗಳನ್ನು ಟ್ರಕ್‌ಗೆ ಹಾಕಿ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾನು ಸರ್ಕಾರದ ಸತ್ಯವನ್ನು ಬಯಲು ಮಾಡಿದ್ದಕ್ಕಾಗಿ ಈ ಬೆಲೆಯನ್ನು ತೆರುತ್ತಿದ್ದೇನೆ ಎಂದು ಹೇಳಿದ್ದಾರೆ.

 

ಇಂದು ಸರ್ಕಾರಿ ಬಂಗಲೆ ತೆರವು ಮಾಡಲಿರೋ ರಾಹುಲ್‌ ಗಾಂಧಿ: ಅಮ್ಮನ ಮನೆಗೆ ಶಿಫ್ಟ್‌ ಆಗ್ತಾರೆ ಕಾಂಗ್ರೆಸ್‌ ನಾಯಕ

"ಭಾರತದ ಜನರು 19 ವರ್ಷಗಳ ಕಾಲ ಈ ಮನೆಯನ್ನು ನನಗೆ ನೀಡಿದ್ದಾರೆ ಮತ್ತು ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಸತ್ಯವನ್ನು ಮಾತನಾಡಿದ್ದಕ್ಕೆ ಸಿಕ್ಕ ಬೆಲೆ ಮತ್ತು ಆ ಬೆಲೆಯನ್ನು ತೆರಲು ನಾನು ಸಿದ್ಧ" ಎಂದು ರಾಹುಲ್ ಹೇಳಿದರು. 10, ಜನಪಥ್‌ನಲ್ಲಿರುವ ತಮ್ಮ ತಾಯಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕೆಲಕಾಲ ವಾಸ್ತವ್ಯ ಹೂಡಲಿದ್ದೇನೆ ಎಂದು ಇದೇ ವೇಳೆ ಹೇಳಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more