News Hour: ದೇಶಾದ್ಯಂತ ಮುಂದುವರೆದ ಮಹಾಮಳೆ ಆರ್ಭಟ:  ಅಮರನಾಥ ಯಾತ್ರೆ ಪುನಾರಂಭ

News Hour: ದೇಶಾದ್ಯಂತ ಮುಂದುವರೆದ ಮಹಾಮಳೆ ಆರ್ಭಟ: ಅಮರನಾಥ ಯಾತ್ರೆ ಪುನಾರಂಭ

Published : Jul 11, 2022, 11:23 PM IST

Rain Updates: ದೇಶಾದ್ಯಂತ ಮಹಾಮಳೆ ಆರ್ಭಟಿಸುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ದೆಹಲಿಯಲ್ಲಿ ವರುಣದೇವನ ರುದ್ರ ನರ್ತನ ಶುರುವಾಗಿದೆ

ನವದೆಹಲಿ (ಜು. 11): ದೇಶಾದ್ಯಂತ ಮಹಾಮಳೆ ಆರ್ಭಟಿಸುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ದೆಹಲಿಯಲ್ಲಿ ವರುಣದೇವನ ರುದ್ರ ನರ್ತನ ಶುರುವಾಗಿದೆ. ಮೇಘಸ್ಫೋಟದಿಂದಾಗಿ ಭಾಗಶಃ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದಿನಿಂದ ಮತ್ತೆ ಶುರುವಾಗಿದೆ. ಮಧ್ಯಾಹ್ನದ ವೇಳೆಗೆ ಪಂಚತಾರ್ಣಿ ಕಡೆಯಿಂದ ಯಾತ್ರಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಬಾಲ್ಟಾಲ್ ಬೇಸ್ ಕ್ಯಾಂಪ್‌ನಲ್ಲಿ ತಂಗಿದ್ದ 4,026 ಮಂದಿ ಅಮರನಾಥದತ್ತ ಮುಖ ಮಾಡಿದ್ದಾರೆ. 

ಸಿಆರ್‌‍ಪಿಎಫ್‌, ಭದ್ರತಾ ಪಡೆಗಳ 110 ವಾಹನಗಳೊಂದಿಗೆ 4,026 ಯಾತ್ರಿಗಳಿರುವ 12ನೇ ಬ್ಯಾಚ್ ಭಗವತಿ ನಗರ ಯಾತ್ರಿ ನಿವಾಸದಿಂದ ಹೊರಟಿದ್ದಾರೆ. 3,192 ಪುರುಷರು, 641 ಮಹಿಳೆಯರು, 13 ಮಕ್ಕಳು, 174 ಸಾಧುಗಳು ಮತ್ತು ಆರು ಮಂದಿ ಸಾಧ್ವಿಗಳನ್ನು ಈ ಗುಂಪು ಒಳಗೊಂಡಿದೆ.

ಇದನ್ನೂ ನೋಡಿ:  ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

ಇನ್ನು ಗುಜರಾತ್‌ನಲ್ಲಿ ಮಹಾಮಳೆ ಆರ್ಭಟಿಸುತ್ತಿದೆ. ದಕ್ಷಿಣ ಗುಜರಾತ್‌ನ ವಲ್ಸಾದ್, ನವಸಾರಿ, ತಾಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಪಾಲ್ಡಿ, ವಸಾನ ಮತ್ತು ಎಲ್ಲಿಸ್ ನದಿ ಪಾತ್ರದಲ್ಲಿ ಮಳೆ ಅಬ್ಬರ ಜೋರಾಗಿದೆ. ಗುಜರಾತ್‌ನ ಖೇಡಾ ಜಿಲ್ಲೆಯ ನಾಡಿಯಾಡ್‌ನ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು ಹಲವರನ್ನು ಸ್ಥಳಾಂತರ ಮಾಡಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜೊತೆ ಚರ್ಚೆ ನಡೆಸಿರುವ ಮೋದಿ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ.  

ಮಹಾರಾಷ್ಟ್ರದಲ್ಲೂ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಉಲ್ಲಾಸ್, ಸಾವಿತ್ರಿ, ಪಾತಾಳಗಂಗಾ, ಅಂಬಾ ಮತ್ತು ಗರ್ಹಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ದೆಹಲಿಯಲ್ಲೂ ಮಾನ್ಸೂನ್ ಮಳೆ ಆರಂಭವಾಗಿದೆ. ಮುಂದಿನ ಐದು ದಿನಗಳ ಕಾಲ ದೇಶಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರದಲ್ಲಿ ಜುಲೈ 15ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more