News Hour: ದೇಶಾದ್ಯಂತ ಮುಂದುವರೆದ ಮಹಾಮಳೆ ಆರ್ಭಟ:  ಅಮರನಾಥ ಯಾತ್ರೆ ಪುನಾರಂಭ

News Hour: ದೇಶಾದ್ಯಂತ ಮುಂದುವರೆದ ಮಹಾಮಳೆ ಆರ್ಭಟ: ಅಮರನಾಥ ಯಾತ್ರೆ ಪುನಾರಂಭ

Published : Jul 11, 2022, 11:23 PM IST

Rain Updates: ದೇಶಾದ್ಯಂತ ಮಹಾಮಳೆ ಆರ್ಭಟಿಸುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ದೆಹಲಿಯಲ್ಲಿ ವರುಣದೇವನ ರುದ್ರ ನರ್ತನ ಶುರುವಾಗಿದೆ

ನವದೆಹಲಿ (ಜು. 11): ದೇಶಾದ್ಯಂತ ಮಹಾಮಳೆ ಆರ್ಭಟಿಸುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ದೆಹಲಿಯಲ್ಲಿ ವರುಣದೇವನ ರುದ್ರ ನರ್ತನ ಶುರುವಾಗಿದೆ. ಮೇಘಸ್ಫೋಟದಿಂದಾಗಿ ಭಾಗಶಃ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದಿನಿಂದ ಮತ್ತೆ ಶುರುವಾಗಿದೆ. ಮಧ್ಯಾಹ್ನದ ವೇಳೆಗೆ ಪಂಚತಾರ್ಣಿ ಕಡೆಯಿಂದ ಯಾತ್ರಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಬಾಲ್ಟಾಲ್ ಬೇಸ್ ಕ್ಯಾಂಪ್‌ನಲ್ಲಿ ತಂಗಿದ್ದ 4,026 ಮಂದಿ ಅಮರನಾಥದತ್ತ ಮುಖ ಮಾಡಿದ್ದಾರೆ. 

ಸಿಆರ್‌‍ಪಿಎಫ್‌, ಭದ್ರತಾ ಪಡೆಗಳ 110 ವಾಹನಗಳೊಂದಿಗೆ 4,026 ಯಾತ್ರಿಗಳಿರುವ 12ನೇ ಬ್ಯಾಚ್ ಭಗವತಿ ನಗರ ಯಾತ್ರಿ ನಿವಾಸದಿಂದ ಹೊರಟಿದ್ದಾರೆ. 3,192 ಪುರುಷರು, 641 ಮಹಿಳೆಯರು, 13 ಮಕ್ಕಳು, 174 ಸಾಧುಗಳು ಮತ್ತು ಆರು ಮಂದಿ ಸಾಧ್ವಿಗಳನ್ನು ಈ ಗುಂಪು ಒಳಗೊಂಡಿದೆ.

ಇದನ್ನೂ ನೋಡಿ:  ಮೇಘಸ್ಫೋಟ ನಂತರ ಈಗ ಹೇಗಿದೆ ಅಮರನಾಥ? ಇಲ್ಲಿದೆ ಬಾಲ್ಟಾಲ್​​​ ಗ್ರೌಂಡ್​ ರಿಪೋರ್ಟ್

ಇನ್ನು ಗುಜರಾತ್‌ನಲ್ಲಿ ಮಹಾಮಳೆ ಆರ್ಭಟಿಸುತ್ತಿದೆ. ದಕ್ಷಿಣ ಗುಜರಾತ್‌ನ ವಲ್ಸಾದ್, ನವಸಾರಿ, ತಾಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಪಾಲ್ಡಿ, ವಸಾನ ಮತ್ತು ಎಲ್ಲಿಸ್ ನದಿ ಪಾತ್ರದಲ್ಲಿ ಮಳೆ ಅಬ್ಬರ ಜೋರಾಗಿದೆ. ಗುಜರಾತ್‌ನ ಖೇಡಾ ಜಿಲ್ಲೆಯ ನಾಡಿಯಾಡ್‌ನ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು ಹಲವರನ್ನು ಸ್ಥಳಾಂತರ ಮಾಡಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜೊತೆ ಚರ್ಚೆ ನಡೆಸಿರುವ ಮೋದಿ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ.  

ಮಹಾರಾಷ್ಟ್ರದಲ್ಲೂ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಉಲ್ಲಾಸ್, ಸಾವಿತ್ರಿ, ಪಾತಾಳಗಂಗಾ, ಅಂಬಾ ಮತ್ತು ಗರ್ಹಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ದೆಹಲಿಯಲ್ಲೂ ಮಾನ್ಸೂನ್ ಮಳೆ ಆರಂಭವಾಗಿದೆ. ಮುಂದಿನ ಐದು ದಿನಗಳ ಕಾಲ ದೇಶಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರದಲ್ಲಿ ಜುಲೈ 15ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more