ಮೋದಿ ಭಾರತೀಯರ ಸುರಕ್ಷತೆ ಬಗ್ಗೆ ಬದ್ಧತೆ ಹೊಂದಿರುವ ನಾಯಕ: ರಾಜೀವ್ ಚಂದ್ರಶೇಖರ್

ಮೋದಿ ಭಾರತೀಯರ ಸುರಕ್ಷತೆ ಬಗ್ಗೆ ಬದ್ಧತೆ ಹೊಂದಿರುವ ನಾಯಕ: ರಾಜೀವ್ ಚಂದ್ರಶೇಖರ್

Published : Nov 18, 2023, 11:17 AM IST

ಭಾರತ-ಚೀನಾ ಯುದ್ಧದ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿದ್ದು, ಹಿಂದಿ, ಚೀನಿ ಭಾಯಿ ಭಾಯಿ ನೀತಿಯೇ ಭಾರತದ ಹಿನ್ನಡೆಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.
 

ಕಾಂಗ್ರೆಸ್ ನೇತೃತ್ವದ ಅಂದಿನ ದುರ್ಬಲ ರಾಜಕೀಯ ನಾಯಕತ್ವದಿಂದಾಗಿ 1962ರ ಭಾರತ-ಚೀನಾ(India-China) ಯುದ್ಧ ದೇಶದ ಇತಿಹಾಸದಲ್ಲಿ ಕರಾಳ ಮತ್ತು ಅವಮಾನಕರ ಅಧ್ಯಾಯನ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್(Rajeev Chandrasekhar) ಹೇಳಿದ್ದಾರೆ. ಅಕ್ಟೋಬರ್ 20 ರಿಂದ ನವೆಂಬರ್ 21, 1962ರವರೆಗೆ ಇತಿಹಾಸದಲ್ಲಿ ಕರಾಳ ದಿನವಾಗಿತ್ತು. ಅಂದು ಭಾರತ ಅನುಭವಿಸಿದ ಹಿನ್ನಡೆಗೆ ಹಿಂದಿ, ಚೀನಿ ಭಾಯಿ ಭಾಯಿ ನೀತಿಯೇ ಕಾರಣ ಅಂತಾ ವಾಗ್ದಾಳಿ ನಡೆಸಿದ್ರು. ಅಷ್ಟೇ ಅಲ್ಲ ಕಾಂಗ್ರೆಸ್(Congress) ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಂದಿನ ಯುದ್ಧದಲ್ಲಿ ಮರಣ ಹೊಂದಿದವರನ್ನು ಭಾರತಕ್ಕೆ ಕರೆತರುವಲ್ಲಿ ಪಟ್ಟ ಸಾಹಸವನ್ನ ನಮ್ಮ ತಂದೆ ಎಂ.ಕೆ. ಚಂದ್ರಶೇಖರ್ ಬಿಚ್ಚಿಟ್ಟಿದ್ದಾರೆ ಅಂತಾ ಹೇಳಿದ್ರು. ಇದರ ಜೊತೆ  ಬರಿ ಕೈಗಳಿಂದಲೂ ವೀರಾವೇಶದಿಂದ ಹೋರಾಡಿದ್ರಿಂದ ಭಾರೀ ಸಾವು ನೋವುಗಳು ಉಂಟು ಆಗಿತ್ತು. ಅಲ್ಲದೇ ವೀರರು ಭಾರತವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಬಲಿಕೊಟ್ಟ ಕಥೆ ನಮ್ಮ ಮುಂದಿದೆ ಅಂತಾ ಹೇಳಿದ್ದಾರೆ. ನಮ್ಮ ಭವಿಷ್ಯವನ್ನು ವಿಕಸಿತ ಭಾರತ ಎಂದು ನೋಡುತ್ತಿರುವಾಗ ದುರ್ಬಲ ನಾಯಕತ್ವ ಅದನ್ನ ಹಾಳು ಮಾಡಿದೆ. ಇಂದಿನ ಆಧುನಿಕ ಜಗತ್ತಿನಲ್ಲಿ ಆರ್ಥಿಕ ಬೆಳವಣಿಗೆ ಬಡತನ ಮುಕ್ತ ಭಾರತದ ನಮ್ಮ ಆಕಾಂಕ್ಷೆಗಳಿಗೆ ಬಲವಾದ ಭದ್ರತೆ ಸಿಕ್ಕಿದೆ. ಕಳೆದ 9 ವರ್ಷಗಳಿಂದ ಒಬ್ಬ ಸಮರ್ಥ ನಾಯಕತ್ವವನ್ನ ಭಾರತ ಹೊಂದಿದೆ ಎಂದ ರಾಜೀವ್ ಚಂದ್ರಶೇಖರ್ ಎಲ್ಲ ಭಾರತೀಯರನ್ನು ಸುರಕ್ಷಿತಗೊಳಿಸುವ ತನ್ನ ಬದ್ಧತೆಯನ್ನು ಪ್ರತಿಪಾದಿಸುವ ನಾಯಕ ಅಂದ್ರೆ ಅದು ಮೋದಿ ಎಂದು ಶಾಘ್ಲಿಸಿದ್ದಾರೆ. ಇದರ ಜೊತೆ ಮೋದಿ ನಾಯಕತ್ವದಲ್ಲಿ ಸೈನಿಕ ಪಡೆಗೆ ದೊಡ್ಡ ಬಲ ಬಂದಿದ್ದು, ಅವರ ನೇತೃತ್ವದಲ್ಲಿ ಆಧುನಿಕ ಶಸ್ತಾಸ್ತ್ರಗಳು, ಸೈನಿಕರಿಗೆ ಮೂಲ ಸೌಕರ್ಯ ಸಿಕ್ತಿದ್ದು ದೇಶ ದೊಡ್ಡ ಆಧುನಿಕರಣದತ್ತ ಸಾಗುತ್ತಿದೆ. ಇಂಥಾ ನಾಯಕತ್ವ ಎಂದಿಗೂ ಕಳೆದುಕೊಳ್ಳಬಾರದು ಅಂತಾ ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸೋಷಿಯಲ್ ಮೀಡಿಯಾದಲ್ಲಿ ಡೀಪ್‌ಫೇಕ್ ಸಂಚಲನ: ಪ್ರಧಾನಿ ಮೋದಿಯನ್ನೂ ಬಿಟ್ಟಿಲ್ಲ ಈ ವಿಡಿಯೋ !

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more