ಅರುಣ್ ಯೋಗಿರಾಜ್ ಊರಲ್ಲಿ ಈಗಲೇ ರಾಮೋತ್ಸವ! ರಾಮಲಲ್ಲಾ ವಿಗ್ರಹ ಕೆತ್ತನೆಗೆ ಎದುರಾಗಿದ್ದ ಸವಾಲುಗಳೇನೇನು.?

ಅರುಣ್ ಯೋಗಿರಾಜ್ ಊರಲ್ಲಿ ಈಗಲೇ ರಾಮೋತ್ಸವ! ರಾಮಲಲ್ಲಾ ವಿಗ್ರಹ ಕೆತ್ತನೆಗೆ ಎದುರಾಗಿದ್ದ ಸವಾಲುಗಳೇನೇನು.?

Published : Jan 03, 2024, 03:03 PM IST

ಹೇಗಿದ್ದಾನೆ ಗೊತ್ತಾ ಕನ್ನಡಿಗ ಕೆತ್ತಿದ ಬಾಲ ರಾಮ? 
ಹೇಗೆ ನಡೆದಿತ್ತು ರಾಮ ವಿಗ್ರಹದ ಆಯ್ಕೆ ಪ್ರಕ್ರಿಯೆ?
ರಾಮ ವಿಗ್ರಹಕ್ಕೆ ಬಳಕೆಯಾಗಿದ್ದು ಕರುನಾಡ ಶಿಲೆ!

ಅಯೋಧ್ಯೆಯ  ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಕನ್ನಡಿಗ ಕೆತ್ತಿದ ರಾಮ ವಿಗ್ರಹ. ವಿಶ್ವವೇ ಎದುರು ನೋಡ್ತಾ ಇದ್ದ ಅಯೋಧ್ಯೆ ರಾಮಮಂದಿರದಲ್ಲಿ, ಇದೇ ಜನವರಿ 22ರಂದು ರಾಮದೇವರ ಪ್ರಾಣ ಪತಿಷ್ಠಾಪನೆಯಾಗಲಿದೆ. ಕೋಟಿ ಕೋಟಿ ಭಕ್ತರು ಕಾಯ್ತಾ ಇರೋ ಆ ಪವಿತ್ರ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದೆ. ಒಂದೊಂದು ನಿಮಿಷ ಉರುಳಿದಂತೆಲ್ಲಾ ದೇಶದಲ್ಲಿ ಸಂಭ್ರಮ ನೂರ್ಮಡಿಯಾಗ್ತಾ ಇದೆ. ಇಂಥಾ ಹೊತ್ತಲ್ಲಿ, ಕನ್ನಡಿಗರ ಸಡಗರ ಹೆಚ್ಚಿಸೋ ಮತ್ತೊಂದು ಸಂಗತಿ ಸಂಭವಿಸಿದೆ. ಅದೇನು ಅಂದ್ರೆ, ಅಯೋಧ್ಯೆ ರಾಮಮಂದಿರಕ್ಕೆ ಕನ್ನಡಿಗ ಕೆತ್ತಿದ ಪ್ರಭು ಶ್ರೀರಾಮನ ಮೂರ್ತಿ ಆಯ್ಕೆಯಾಗಿದೆ. ಅರುಣ್ ಯೋಗಿರಾಜ್(Arun Yogiraj). ಇವತ್ತು ದೇಶದೆಲ್ಲೆಡೆ ಸದ್ದು ಮಾಡ್ತಾ ಇರೋ ಹೆಸರು. ಪರಿಶ್ರಮಕ್ಕೆ.. ಪರಮಾದ್ಭುತ ವಿಗ್ರಹ ನಿರ್ಮಾಣಕ್ಕೆ ಅರುಣ್ ಯೋಗಿರಾಜ್ ಕೇರ್ ಆಫ್ ಅಡ್ರಸ್.. ಅಂಥಾ ಅರುಣ್ ಅವರು ನಿರ್ಮಿಸಿದ ರಾಮಲಲ್ಲಾ ವಿಗ್ರಹವೇ(Ram Lalla idol), ಅಯೋಧ್ಯೆಯಲ್ಲಿ(Ayodhya) ಪ್ರತಿಷ್ಠಾಪನೆಗೊಳ್ಳೋಕೆ ಸಜ್ಜಾಗಿದೆ..ರಾಮಲಲ್ಲಾ ವಿಗ್ರಹ ನಿರ್ಮಾಣವಾಗಿರೋದು ಕೂಡ, ಕನ್ನಡ ನೆಲದ ಶಿಲೆಯಿಂದ.. ಮೈಸೂರಿನ ಎಚ್.ಡಿ ಕೋಟೆ ಹಾರೋಹಳ್ಳಿಯ ಶಿಲೆ ಅದು.. ರಾಮದಾಸ್ ಅನ್ನೋರ ಜಮೀನಿನಲ್ಲಿ 10 ಅಡಿ ಆಳದಲ್ಲಿ  ಕಪ್ಪು ಶಿಲೆಯೊಂದು ಅಡಗಿತ್ತು. ಅವತ್ತು ಸ್ಥಳದಲ್ಲಿಯೇ ಮಾನಯ್ಯ ಬಡಿಗೇರ್ ರಿಂದ ಆ ಕಲ್ಲಿನ ಪರೀಕ್ಷೆ ನಡೆದಿತ್ತು. ಸುಮಾರು 40 ಟನ್ ನಷ್ಟು ಕಲ್ಲಗಳನ್ನೂ ಅಯೋಧ್ಯೆಗೆ  ಅರುಣ್ ಅವರು ತಗೊಂಡ್ ಹೋಗಿದ್ರು. ಅಷ್ಟೇ ಅಲ್ಲ, ಇಂಥಾ ಶಿಲೆಗಳನ್ನ ಪರೀಕ್ಷೆ ಮಾಡೋ, IIRM ನಡೆಸಿದ ಎಲ್ಲಾ ಟೆಸ್ಟೂಗಳಲ್ಲೂ ಈ ಮೈಸೂರಿನ ಶಿಲೆ ಪಾಸಾಗಿತ್ತು.

ಇದನ್ನೂ ವೀಕ್ಷಿಸಿ:  Shivamogga: ಮುಚ್ಚಿಹೋಗಿದ್ದ ಕಂಪನಿ ಮತ್ತೆ ಬಂದಿರೋದ್ಯಾಕೆ..? ಹೊಸ ಹೋರಾಟಕ್ಕೆ ಸಜ್ಜಾಗುತ್ತಿದೆ ಶಿವಮೊಗ್ಗ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more