Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Ram Mandir: ಕೌಸಲ್ಯಸುಪ್ರಜನಿಗೆ ‘ಪಟ್ಟಾಭಿಷೇಕ’ದ ಸಂಭ್ರಮ: ದಶರಥನಂದನ ಊರಿನಲ್ಲಿ ಮೇಳೈಸಿದ ‘ರಾಮರಾಜ್ಯ’

Published : Jan 22, 2024, 10:32 AM ISTUpdated : Jan 22, 2024, 10:33 AM IST

ಶತಕೋಟಿ ರಾಮಭಕ್ತರು ದೈವಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ರಾಮಭಕ್ತರ ಕನಸು ನನಸಾಗಲಿದ್ದು, ಪ್ರಧಾನಿ ಮೋದಿ ಸಾರಥ್ಯದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.

ಇಂದು ಹಿಂದುಗಳಿಗೆ ಅತ್ಯಂತ ಮಹತ್ವದ ದಿನ. ಶತಕೋಟಿ ಭಾರತೀಯರ ಕನಸು ಸಕಾರಗೊಳ್ಳುವ ಸುದಿನನ. ಹೌದು ಕೌಸಲ್ಯಸುಪ್ರಜ ಬಾಲ ರಾಮನಿಗೆ ಪ್ರಾಣಪ್ರತಿಷ್ಠಾಪಣೆ ನಡೆಯಲಿದ್ದು, ಎಲ್ಲೆಲ್ಲೂ ರಾಮಘೋಷ ಮೊಳಗಿದೆ. ಭಕ್ತಿಸಾಗರದಲ್ಲಿ ಅಯೋಧ್ಯೆ(Ayodhya) ಮಿಂದೇಳುತ್ತಿದೆ.380 ಅಡಿ ಉದ್ದ, 250 ಅಡಿ ಅಗಲ. ಮೂರು ಮಹಡಿಗಳ ಬೃಹತ್ ಭವ್ಯ ಮಂದಿರ ನಾಗರ ಶೈಲಿಯಲ್ಲಿ ವಿನ್ಯಾಸಗೊಂಡಿದ್ದು, 51 ಇಂಚು ಎತ್ತರದ ರಾಮಲಲ್ಲಾನ ಮೂರ್ತಿ ಭವ್ಯ ಮಂದಿರದಲ್ಲಿ ವಿರಾಜಮಾನವಾಗಲಿದೆ. ರಾಮಮಂದಿರದಲ್ಲಿ ಬೆಳಗ್ಗೆ 6.30ರಿಂದಲೇ ಧಾರ್ಮಿಕ ವಿಧಿವಿಧಾನಗಳು ಶುರುವಾಗಲಿವೆ. ಬೆಳಗ್ಗೆ 6.30ಕ್ಕೆ ರಾಮಲಲ್ಲಾ ಮೂರ್ತಿಗೆ(Ram Lalla idol) ಶೃಂಗಾರ ಮಾಡಿ ಜಾಗರಣ ಆರತಿ ಬೆಳಗಲಾಗುತ್ತದೆ. ಇನ್ನು 7 ಗಂಟೆಯಿಂದಲೇ ರಾಮನ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ರಾಮಮಂದಿರ(Ram Mandir) ಟ್ರಸ್ಟ್‌ ನೀಡಿರುವ ಪಾಸ್‌ಗಳ ಕ್ಯೂ ಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಭಕ್ತರು ದೇವಾಲಯ ಪ್ರವೇಶಿಸಿ ಬೆಳಗ್ಗೆ 7 ಗಂಟೆಯಿಂದ 11.30ರವರೆಗೆ ರಾಮನ ದರ್ಶನ ಪಡೆಯಬಹುದಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಆರತಿ ನಡೆಯಲಿದೆ.

ಇದನ್ನೂ ವೀಕ್ಷಿಸಿ:  Ayodhya Ram Mandir : ಏನಿದು “ಕ್ಷತ್ರಿಯ” ಶಪಥ..? ಭೀಷಣ ಪ್ರತಿಜ್ಞೆ ಈಡೇರಿದ್ದು ಹೇಗೆ..?

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more