84 ಸೆಕೆಂಡ್‌ಗಳ ವಿಶೇಷ ಮುಹೂರ್ತದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ..! 84 ಸೆಕೆಂಡ್‌ಗಳ ಶುಭ ಮುಹೂರ್ತದ ವಿಶೇಷತೆ ಏನ್ ಗೊತ್ತಾ..?

84 ಸೆಕೆಂಡ್‌ಗಳ ವಿಶೇಷ ಮುಹೂರ್ತದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ..! 84 ಸೆಕೆಂಡ್‌ಗಳ ಶುಭ ಮುಹೂರ್ತದ ವಿಶೇಷತೆ ಏನ್ ಗೊತ್ತಾ..?

Published : Dec 31, 2023, 02:46 PM IST

ಪ್ರಾಣ ಪ್ರತಿಷ್ಠಾಪನೆಯ ಆತಿಥ್ಯ ವಹಿಸಲಿದ್ದಾರೆ ಪ್ರಧಾನಿ ಮೋದಿ..!
ಭವ್ಯ ಮಂದಿರದಲ್ಲಿ ವಿರಾಜಮಾನನಾಗಲಿದ್ದಾನೆ ಶ್ರೀರಾಮಚಂದ್ರ..!
ಜನವರಿ 22ಕ್ಕೆ ದೇಶಾದ್ಯಂತ ರಾಮಜ್ಯೋತಿ ಬೆಳಗಲು ಮೋದಿ ಕರೆ..!

500 ವರ್ಷಗಳ ಕನಸು.. ಕೋಟಿ ಕೋಟಿ ರಾಮಭಕ್ತರ ತಪಸ್ಸು.. ಶತಮಾನಗಳ ಕಾಯುವಿಕೆ ಅಂತ್ಯಗೊಳ್ಳುವ ದಿನ ಹತ್ತಿರ ಬರ್ತಾ ಇದೆ. ಜನವರಿ 22ಕ್ಕೆ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ(Ayodhya) ರಾಮಮಂದಿರ(Ram Mandir) ಲೋಕಾರ್ಪಣೆ. ಭವ್ಯ ದಿವ್ಯ ನವ್ಯ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಬಾಲ ರಾಮನ ವಿಗ್ರಹ. ರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಫಿಕ್ಸ್ ಆಗಿದೆ 84 ಸೆಕೆಂಡ್'ಗಳ ವಿಶೇಷ ಮುಹೂರ್ತ. ಶ್ರೀರಾಮ ಆದರ್ಶದ ಸಂಕೇತ, ಶ್ರೀರಾಮ ಸಮಾನತೆಯ ಸಂಕೇತ, ಶ್ರೀರಾಮ ಪರಂಪರೆಯ ಸಂಕೇತ, ಶ್ರೀರಾಮ ಸರ್ವ ಶ್ರೇಷ್ಠತೆಯ ಸಂಕೇತ. ಮರ್ಯಾದಾ ಪುರುಷೋತ್ತಮ, ರಘುಕುಲ ತಿಲಕ, ಸೂರ್ಯವಂಶದ ಸೂರ್ಯ ಶ್ರೀರಾಮಚಂದ್ರ ಅಯೋಧ್ಯೆಯಲ್ಲಿ ಪುನರ್'ಪ್ರತಿಷ್ಠೆಯಾಗೋ ಕಾಲ ಹತ್ತಿರ ಬರ್ತಾ ಇದೆ. ಕೋಟ್ಯಂತರ ಭಾರತೀಯರ ಶತ ಶತಮಾನಗಳ ಕನಸು ಸಾಕಾರಗೊಳ್ಳಲು ಕ್ಷಣಗಣನೆ ಶುರುವಾಗಿದೆ. ಜನವರಿ 22, 2024.ಆ ದಿನ ಯಾವಾಗ ಬರುತ್ತೋ, ಯಾವಾಗ ಆ ಶುಭಮುಹೂರ್ತ ಸಂಭವಿಸುತ್ತೋ, ಯಾವಾಗ ಆ ಭವ್ಯ ದರ್ಶನ ನಮ್ಮದಾಗುತ್ತೋ ಅಂತ ಕೋಟಿಗಟ್ಟಲೆ ಹಿಂದೂಗಳು ಕಾಯ್ತಾ ಇದಾರೆ. ಯಾಕಂದ್ರೆ, ಆ ಶುಭದಿನವೇ, ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ನೆರವೇರಲಿದೆ.ಜನವರಿ 22ಕ್ಕೆ ಸಾಕಾರಗೊಳ್ಳಲಿರೋದು ಸುದೀರ್ಘ 500 ವರ್ಷಗಳ ಕನಸು. ಅವತ್ತು ಶ್ರೀರಾಮಚಂದ್ರನ ಮೂರ್ತಿ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರೋ ದಿನ. ಆ ದಿನವನ್ನು ದೇಶಾದ್ಯಂತ ದೀಪಾವಳಿಯಂತೆ ಆಚರಿಸ್ಬೇಕು ಅಂತ ಪ್ರಧಾನಿ ನರೇಂದ್ರ ಮೋದಿ(Narendra Modi) ಕರೆ ಕೊಟ್ಟಿದ್ದಾರೆ. ಅಯೋಧ್ಯೆಯಲ್ಲಿ ಶನಿವಾರ ವಾಲ್ಮೀಕಿ ಮಹರ್ಷಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮೋದಿ, ಜನವರಿ 22ರಂದು ಮನೆ ಮನೆಯಲ್ಲೂ ರಾಮಜ್ಯೋತಿ ಬೆಳಗುವಂತೆ ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Theft in Tumakuru: ಚಳಿ ಇದೆ ಅಂತ ಬೆಚ್ಚಗೆ ಮಲಗಿದರೆ ಹುಷಾರ್..! ಚಿನ್ನ ದೋಚಲು ಬರುತ್ತಿದ್ದಾರೆ ಚಳಿಗಾಲದ ಕಳ್ಳರು..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more