ಅಯೋಧ್ಯೆಯಲ್ಲಿ ರಾಮಮಂದಿರ; ರಂಗು ರಂಗಾಗಿ ಕಂಗೊಳಿಸುತ್ತಿದೆ ಅಯೋಧ್ಯಾ ನಗರ

Aug 4, 2020, 5:18 PM IST

ಲಕ್ನೋ (ಆ. 04): ನೂರಾರು ವರ್ಷಗಳ ಕನಸು, ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದೆ. ಅಯೋಧ್ಯೆಯಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ನಾಳೆ ಅಭಿಜಿನ್ ಮುಹೂರ್ತದಲ್ಲಿ ಪ್ರಧಾನಿ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ಭೂಮಿ ಪೂಜೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಜೊತೆ ವೇದಿಕೆ ಮೇಲೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ , ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಇರುತ್ತಾರೆ. ಸರಯೂ ನದಿ ದಂಡೆಯ ಮಂದಿರಗಳಿಗೆ ಹೊಸ ರೂಪ ಕೊಡಲಾಗಿದೆ. ಇಡೀ ಅಯೋಧ್ಯೆ ರಂಗು ರಂಗಾಗಿ ಕಂಗೊಳಿಸುತ್ತಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!