ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!

Published : Jul 27, 2022, 03:00 PM ISTUpdated : Jul 27, 2022, 03:39 PM IST

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಜುಲೈ 26.. ಪ್ರತಿ ಭಾರತೀಯನೂ  ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ತಿರುಗಬೇಕಾದ ದಿನ ಇದು. ಗುಳ್ಳೆ ನರಿಯ ಹಾಗೆ, ದಾಳಿ ನಡೆಸೋಕೆ ಬಂದವರ ಹೆಡೆಮುರಿ ಕಟ್ಟಿದ ದಿನ ಇದು. ಇಡೀ ಜಗತ್ತಿಗೆ ಭಾರತದ ತಾಕತ್ತು ಏನು ಅಂತ ತೋರಿಸಿಕೊಟ್ಟ ದಿನ ಇದು

ಕೆಲವು ಸಲ ಹಿಮಾಲಯದ ವಾತಾವರಣ ಮನುಷ್ಯರಿಗೆ ಸಹಿಸೋಕೂ ಸಾಧ್ಯವಾಗದಷ್ಟು ಭೀಕರವಾಗಿ ಬದಲಾಗಿಬಿಡುತ್ತೆ. ಹಾಗಾಗಿನೇ, ಭಾರತ ಮತ್ತು ಪಾಕಿಸ್ತಾನ ಒಂದು ಒಪ್ಪಂದ ಮಾಡಿಕೊಂಡವು. ಪರಿಸ್ಥಿತಿ ಪ್ರತೀಕೂಲವಿದ್ದಾಗ, ವಾತಾವರಣ ಅಪಾಯಕಾರಿಯಾಗಿದ್ದಾಗ, ಈ ಪರ್ವತದ ನೆತ್ತಿ ಮೇಲೆ ಯಾರೂ ಇರಬಾರದು. ಯಾರೂ ಇನ್ನೊಬ್ಬರ ಮೇಲೆ ಅತಿಕ್ರಮಣ ಮಾಡಬಾರದು ಅಂತ. ಭಾರತವೇನೋ ಈ ಅಗ್ರಿಮೆಂಟಿಗೆ ಕಟಿಬದ್ಧವಾಗಿತ್ತು.. ಆದ್ರೆ ಪಾಕಿಸ್ತಾನ ಈ ನಿಯಮ ಮುರಿದಿತ್ತು. 1999 ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ, ಪಾಕಿಸ್ತಾನಿ ಸೈನಿಕರು ಕಾರ್ಗಿಲ್ ಪರ್ವತ ಪ್ರದೇಶವನ್ನ ಆವರಿಸಿಕೊಂಡರು.

ಈ ಪರಿ ಪ್ರಮಾಣದಲ್ಲಿ ಪಾಕ್ ಸೈನಿಕರು ಭಾರತದ ಗಡಿ ದಾಟಿ ಬಂದಿದ್ದು ಯಾರಿಗೂ ಗೊತ್ತೇ ಆಗಿರಲಿಲ್ಲ. ಅದನ್ನ ಗಮನಿಸಿದ್ದು ಯಾರು ಗೊತ್ತಾ? ತಾನ್ಶಿ ನಾಮ್ಗ್ಯಲ್ ಅನ್ನೋ ಕುರಿ ಕಾಯುವ ವ್ಯಕ್ತಿ.. ಆತ ಕುರಿ ಕಾಯೋಕೆ ಹೋಗಿದ್ದಾಗ, ದೂರದಲ್ಲಿ ಯಾರೋ ಬೈನಾಕ್ಯುಲರ್ ಹಿಡ್ಕೊಂಡು ನೋಡ್ತಾ ಇದ್ರು. ಕಾರ್ಗಿಲ್ ಪರ್ವತ ಪ್ರದೇಶದಲ್ಲಿ ಯಾರೋ 6 ಜನ ಇದ್ದಾರೆ ಅಂತ ಕುರಿ ಕಾಯೋ ವ್ಯಕ್ತಿ, ಭಾರತೀಯ ಸೈನಿಕರಿಗೆ ತಿಳಿಸ್ತಾನೆ.. ಬಹುಶಃ ಯಾರೋ ಹಳ್ಳಿಯವರು ಹೋಗಿರಬೇಕು ಅಂತ ಅಂದುಕೊಂಡ ಭಾರತೀಯ ಸೈನಿಕರು, ಮೊದಲಿಗೆ 6 ಜನರ ಸೈನಿಕರ ತಂಡವನ್ನು ಕಳಿಸಿಕೊಡ್ತಾರೆ. ಆದ್ರೆ ಅವರ್ಯಾರೂ ವಾಪಸ್ ಬರೋದೇ ಇಲ್ಲ. ಕಾರ್ಗಿಲ್ ಪ್ರದೇಶವನ್ನ ಪಾಕಿಸ್ತಾನ ಸೇನೆ ವಶಕ್ಕೆ ಪಡ್ಕೊಂಡಿದೆ ಅಂತ ಗೊತ್ತಾಗಿದ್ದು ಯಾವಾಗ ಗೊತ್ತಾ? ಕ್ಯಾಪ್ಟನ್ ಸೌರಭ್ ಕಾಲಿಯಾ ನಿಗೂಢವಾಗಿ ಕಾಣೆಯಾದಾಗ...!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು