ಸ್ವಾತಂತ್ರೋತ್ಸವಕ್ಕೆ ರಿಕ್ಕಿ ಕೇಜ್‌ ಉಡುಗೊರೆ: ಬ್ರಿಟಿಷ್‌ ಆರ್ಕೆಸ್ಟ್ರಾದಲ್ಲಿ ರಾಷ್ಟ್ರಗೀತೆಗೆ ವಿಶೇಷ ಟ್ಯೂನ್‌ !

ಸ್ವಾತಂತ್ರೋತ್ಸವಕ್ಕೆ ರಿಕ್ಕಿ ಕೇಜ್‌ ಉಡುಗೊರೆ: ಬ್ರಿಟಿಷ್‌ ಆರ್ಕೆಸ್ಟ್ರಾದಲ್ಲಿ ರಾಷ್ಟ್ರಗೀತೆಗೆ ವಿಶೇಷ ಟ್ಯೂನ್‌ !

Published : Aug 15, 2023, 01:31 PM IST

ಬ್ರಿಟಿಷರಿಂದ ಭಾರತದ ರಾಷ್ಟ್ರಗೀತೆಗೆ ಸಂಗೀತ ಸಂಯೋಜನೆ ಮಾಡಿಸಿದ್ದು ವಿಶೇಷವಾಗಿದೆ. ರಾಷ್ಟ್ರಗೀತೆಗೆ ಅತ್ಯುನ್ನತ ಮಾದರಿ ಸೃಷ್ಟಿ ಮಾಡೋದು ನನ್ನ ಉದ್ದೇಶವಾಗಿತ್ತು ಎಂದು ರಿಕ್ಕಿ ಕೇಜ್‌ ಹೇಳಿದ್ದಾರೆ.

ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ರಿಕ್ಕಿ ಕೇಜ್(Ricky Kej) ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ(national anthem) ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ (tune) ಟಚ್ ಕೊಟ್ಟಿದ್ದಾರೆ. ರಿಕ್ಕಿ ಕೇಜ್ ನಿರ್ದೇಶನದ ವಿಭಿನ್ನ ಬಗೆಯ ರಾಷ್ಟ್ರಗೀತೆ ಸೋಮವಾರ ಬಿಡುಗಡೆಯಾಗಿದೆ. ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬೇ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಿದ್ದು ವಿಶೇಷವಾಗಿದೆ. ಕೇವಲ 3 ಗಂಟೆ ಅವಧಿಯಲ್ಲಿ 100 ಮಂದಿ ಮ್ಯೂಜಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ.ಈ ಬಗ್ಗೆ ಅವರು ಮಾತನಾಡಿದ್ದು, ರಾಷ್ಟ್ರಗೀತೆ ನಾನು ಕಲಿತ ಮೊದಲ ಸಂಗೀತವಾಗಿದೆ. ಬಾಲ್ಯದಲ್ಲಿ ರೈಮ್ಸ್ ಕಲಿಯುವುದಕ್ಕೂ ಮೊದಲೇ ರಾಷ್ಟ್ರಗೀತೆ ಕಲಿತೆ. ರಾಷ್ಟ್ರಗೀತೆ ಸದಾಕಾಲ ನನ್ನೊಳಗಿದೆ. ಈ ಮೊದಲು ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾ(Royal Philharmonic Orchestra) ಜತೆ ಕೆಲಸ ಮಾಡಿದ್ದೇನೆ. ಇದೊಂದು ಅದ್ಭುತ ಆರ್ಕೆಸ್ಟ್ರಾ. ಹೀಗಾಗಿ ನಮ್ಮ ರಾಷ್ಟ್ರಗೀತೆಯನ್ನ, ಈ ಆರ್ಕೆಸ್ಟ್ರಾ ಜೊತೆಗೂಡಿಸಲು ಯೋಚಿಸಿದೆ ಎಂದು ರಿಕ್ಕಿ ಕೇಜ್‌ ಹೇಳಿದ್ದಾರೆ.

ರಾಷ್ಟ್ರಗೀತೆಯನ್ನ ಅತ್ಯುನ್ನತ ಸ್ವರೂಪದಲ್ಲಿ ಪ್ರಸ್ತುತಪಡಿಸಲು ನಿರ್ಧರಿಸಿದೆ. ಇದರ ಸಿದ್ಧತೆಗಾಗಿ ಮೂರು ತಿಂಗಳು ತೆಗೆದುಕೊಂಡೆವು. ಲಂಡನ್ ಅಬೇ ರೋಡ್ ಸ್ಟುಡಿಯೋಸ್‌ನ ಲ್ಲಿ ರಾಷ್ಟ್ರಗೀತೆ ರೆಕಾರ್ಡ್ ಮಾಡಿಲಾಗಿದೆ. ರಾಯಲ್ ಫಿಲ್ಹಾರ್ಮೋನಿಕ್, ಭಾರತದ ರಾಷ್ಟ್ರಗೀತೆಯನ್ನ ರೆಕಾರ್ಡ್ ಮಾಡಿದ ಅತ್ಯಂತ ದೊಡ್ಡ ಆರ್ಕೆಸ್ಟ್ರಾವಾಗಿದೆ. ಈ ಅನುಭವ ನಿಜಕ್ಕೂ ಉತ್ತಮವಾಗಿತ್ತು. ರೆಕಾರ್ಡಿಂಗ್ ರೂಮ್ನಲ್ಲಿ ನಿಲ್ಲುವುದು,100 ಮ್ಯೂಸಿಷಿಯನ್ಸ್ ರಾಷ್ಟ್ರಗೀತೆಗೆ ಸಂಗೀತ ಸಂಯೋಜಿಸುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದು ರಿಕ್ಕಿ ಕೇಜ್‌ ಹೇಳಿದರು.

ಇದನ್ನೂ ವೀಕ್ಷಿಸಿ: ಕೆಂಪುಕೋಟೆಯಿಂದ ಮಣಿಪುರ ಜನತೆಗೆ ಮೋದಿ ಭರವಸೆ, ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವಿಶ್ಲೇಷಣೆ!

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು