ಸ್ವಾತಂತ್ರೋತ್ಸವಕ್ಕೆ ರಿಕ್ಕಿ ಕೇಜ್‌ ಉಡುಗೊರೆ: ಬ್ರಿಟಿಷ್‌ ಆರ್ಕೆಸ್ಟ್ರಾದಲ್ಲಿ ರಾಷ್ಟ್ರಗೀತೆಗೆ ವಿಶೇಷ ಟ್ಯೂನ್‌ !

ಸ್ವಾತಂತ್ರೋತ್ಸವಕ್ಕೆ ರಿಕ್ಕಿ ಕೇಜ್‌ ಉಡುಗೊರೆ: ಬ್ರಿಟಿಷ್‌ ಆರ್ಕೆಸ್ಟ್ರಾದಲ್ಲಿ ರಾಷ್ಟ್ರಗೀತೆಗೆ ವಿಶೇಷ ಟ್ಯೂನ್‌ !

Published : Aug 15, 2023, 01:31 PM IST

ಬ್ರಿಟಿಷರಿಂದ ಭಾರತದ ರಾಷ್ಟ್ರಗೀತೆಗೆ ಸಂಗೀತ ಸಂಯೋಜನೆ ಮಾಡಿಸಿದ್ದು ವಿಶೇಷವಾಗಿದೆ. ರಾಷ್ಟ್ರಗೀತೆಗೆ ಅತ್ಯುನ್ನತ ಮಾದರಿ ಸೃಷ್ಟಿ ಮಾಡೋದು ನನ್ನ ಉದ್ದೇಶವಾಗಿತ್ತು ಎಂದು ರಿಕ್ಕಿ ಕೇಜ್‌ ಹೇಳಿದ್ದಾರೆ.

ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ರಿಕ್ಕಿ ಕೇಜ್(Ricky Kej) ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ(national anthem) ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ (tune) ಟಚ್ ಕೊಟ್ಟಿದ್ದಾರೆ. ರಿಕ್ಕಿ ಕೇಜ್ ನಿರ್ದೇಶನದ ವಿಭಿನ್ನ ಬಗೆಯ ರಾಷ್ಟ್ರಗೀತೆ ಸೋಮವಾರ ಬಿಡುಗಡೆಯಾಗಿದೆ. ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬೇ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಿದ್ದು ವಿಶೇಷವಾಗಿದೆ. ಕೇವಲ 3 ಗಂಟೆ ಅವಧಿಯಲ್ಲಿ 100 ಮಂದಿ ಮ್ಯೂಜಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ.ಈ ಬಗ್ಗೆ ಅವರು ಮಾತನಾಡಿದ್ದು, ರಾಷ್ಟ್ರಗೀತೆ ನಾನು ಕಲಿತ ಮೊದಲ ಸಂಗೀತವಾಗಿದೆ. ಬಾಲ್ಯದಲ್ಲಿ ರೈಮ್ಸ್ ಕಲಿಯುವುದಕ್ಕೂ ಮೊದಲೇ ರಾಷ್ಟ್ರಗೀತೆ ಕಲಿತೆ. ರಾಷ್ಟ್ರಗೀತೆ ಸದಾಕಾಲ ನನ್ನೊಳಗಿದೆ. ಈ ಮೊದಲು ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾ(Royal Philharmonic Orchestra) ಜತೆ ಕೆಲಸ ಮಾಡಿದ್ದೇನೆ. ಇದೊಂದು ಅದ್ಭುತ ಆರ್ಕೆಸ್ಟ್ರಾ. ಹೀಗಾಗಿ ನಮ್ಮ ರಾಷ್ಟ್ರಗೀತೆಯನ್ನ, ಈ ಆರ್ಕೆಸ್ಟ್ರಾ ಜೊತೆಗೂಡಿಸಲು ಯೋಚಿಸಿದೆ ಎಂದು ರಿಕ್ಕಿ ಕೇಜ್‌ ಹೇಳಿದ್ದಾರೆ.

ರಾಷ್ಟ್ರಗೀತೆಯನ್ನ ಅತ್ಯುನ್ನತ ಸ್ವರೂಪದಲ್ಲಿ ಪ್ರಸ್ತುತಪಡಿಸಲು ನಿರ್ಧರಿಸಿದೆ. ಇದರ ಸಿದ್ಧತೆಗಾಗಿ ಮೂರು ತಿಂಗಳು ತೆಗೆದುಕೊಂಡೆವು. ಲಂಡನ್ ಅಬೇ ರೋಡ್ ಸ್ಟುಡಿಯೋಸ್‌ನ ಲ್ಲಿ ರಾಷ್ಟ್ರಗೀತೆ ರೆಕಾರ್ಡ್ ಮಾಡಿಲಾಗಿದೆ. ರಾಯಲ್ ಫಿಲ್ಹಾರ್ಮೋನಿಕ್, ಭಾರತದ ರಾಷ್ಟ್ರಗೀತೆಯನ್ನ ರೆಕಾರ್ಡ್ ಮಾಡಿದ ಅತ್ಯಂತ ದೊಡ್ಡ ಆರ್ಕೆಸ್ಟ್ರಾವಾಗಿದೆ. ಈ ಅನುಭವ ನಿಜಕ್ಕೂ ಉತ್ತಮವಾಗಿತ್ತು. ರೆಕಾರ್ಡಿಂಗ್ ರೂಮ್ನಲ್ಲಿ ನಿಲ್ಲುವುದು,100 ಮ್ಯೂಸಿಷಿಯನ್ಸ್ ರಾಷ್ಟ್ರಗೀತೆಗೆ ಸಂಗೀತ ಸಂಯೋಜಿಸುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದು ರಿಕ್ಕಿ ಕೇಜ್‌ ಹೇಳಿದರು.

ಇದನ್ನೂ ವೀಕ್ಷಿಸಿ: ಕೆಂಪುಕೋಟೆಯಿಂದ ಮಣಿಪುರ ಜನತೆಗೆ ಮೋದಿ ಭರವಸೆ, ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವಿಶ್ಲೇಷಣೆ!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?