ಕೇರಳ ಅಕ್ರಮ ಚಿನ್ನ ಸಾಗಾಣೆ ಪ್ರಕರಣ: ಸ್ವಪ್ನ ಸುರೇಶ್ ಬ್ಯಾಂಕ್‌ ಲಾಕರ್‌ನಿಂದ 45 ಲಕ್ಷ ರೂ ಜಪ್ತಿ!

Jul 27, 2020, 2:28 PM IST

ತಿರುವನಂತಪುರಂ(ಜು.27): ದೇಶದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಅಕ್ರಮ ಚಿನ್ನ ಸಾಗಣೆ ಪ್ರಕರಣದ ತನಿಖೆಯಿಂದ ಹೊಸ ಹೊಸ ಮಾಹಿತಿಗಳು ಹೊರಬರುತ್ತಿದೆ. ಇದೀಗ ಪ್ರಕರಣ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಬ್ಯಾಂಕ್ ಲಾಕರ್‌ನಿಂದ ಬರೋಬ್ಬರಿ 45 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. 

ತಿರುವನಂತಪುರಂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಬ್ಯಾಂಕ್ ಲಾಕರ್ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ಮಾಡಿತ್ತು. ಸುಮಾರು 1 ಕೋಟಿ ರೂಪಾಯಿ ಹಾಗೂ 1 ಕೆಜಿ ಚಿನ್ನ ಜಪ್ತಿ ಮಾಡಲಾಗಿದೆ.