Mar 2, 2022, 6:42 PM IST
ನವದೆಹಲಿ(ಮಾ.02): ಉಕ್ರೇನ್ ಪರಿಸ್ಥಿತಿ ಗಂಭೀರವಾಗಿದೆ. ಇತ್ತ ಭಾರತ ಆಪರೇಶನ್ ಗಂಗಾ ಮೂಲಕ ಭಾರತೀಯ ವಿದ್ಯಾರ್ಥಿಗಳ ರಕ್ಷಣೆ ಕಾರ್ಯ ಚುರುಕುಗೊಳಿಸಿದೆ. ಉಕ್ರೇನ್ನಿಂದ ಪೊಲೆಂಡ್ ಗಡಿ ತಲುಪಿದ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರ ಆಪರೇಶನ್ ಗಂಗಾ ವಿಮಾನದ ಮೂಲಕ ನವದೆಹಲಿಗೆ ಕರೆ ತಂದಿದೆ. ದೆಹಲಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇದೇ ವೇಳೆ ಕಠಿಣ ಪರಿಸ್ಥಿತಿಯಲ್ಲಿ ತಾಳ್ಮೆ ಕಳೆದುಕೊಳ್ಳದೆ, ಧೈರ್ಯದಿಂದ ಇದ್ದ ವಿದ್ಯಾರ್ಥಿಗಳ ಕುರಿತು ನನಗೆ ಹೆಮ್ಮೆ ಇದೆ.