Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Published : Mar 11, 2022, 05:47 PM IST

ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಕೀವ್(ಮಾ.11): ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಮರಿಯುಪೋಲ್‌ ನಗರದ ಹೆರಿಗೆ ಆಸ್ಪತ್ರೆಯೊಂದರ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಇನ್ನೇನು ಹೆರಿಗೆಗೆ ಒಳಗಾಗುತ್ತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿವೆ. ಸ್ಫೋಟ ಎಷ್ಟುತೀವ್ರವಾಗಿತ್ತು ಎಂದರೆ ಅನೇಕ ಮೈಲಿ ದೂರದವರೆಗೆ ಶಬ್ದ ಕೇಳಿಸಿದೆ. ಅಕ್ಕಪಕ್ಕದ ಕಟ್ಟಡಗಳು ಸ್ಫೋಟದ ರಭಸಕ್ಕೆ ನಡುಗಿ ಹೋಗಿವೆ. ಇನ್ನು ಕೀವ್‌ ಸಮೀಪದ ಝೈತೋಮಿರ್‌ ಎಂಬ ನಗರದ 2 ಆಸ್ಪತ್ರೆಗಳ ಮೇಲೂ ರಷ್ಯಾ ಬಾಂಬ್‌ ಮಳೆಗರೆದಿದೆ. ಇದರಲ್ಲಿ ಒಂದು ಮಕ್ಕಳ ಆಸ್ಪತ್ರೆಯಾಗಿದೆ. ಸುದೈವವಶಾತ್‌ ಇಲ್ಲಿ ಸಾವು ನೋವು ಸಂಭವಿಸಿಲ್ಲ. ಮರಿಯುಪೋಲ್‌ ಆಸ್ಪತ್ರೆ ಮೇಲಿನ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದು ಮಾತ್ರ ಖಚಿತವಾಗಿದೆ.

ರಷ್ಯಾ ಈ ರೀತಿ ದಾಳಿ ನಡೆಸುತ್ತಿರುವುದಕ್ಕೆ ಉಕ್ರೇನ್‌ ತೀವ್ರ ಖಂಡನೆ ವ್ಯಕ್ತಪಡಿದೆ. ‘ಮಕ್ಕಳ ಆಸ್ಪತ್ರೆ ಮೇಲೂ ದಾಳಿ ನಡೆಸುವಷ್ಟುರಷ್ಯಾ ನಿಷ್ಕರುಣಿಯಾಗಿದೆ. ಇದೊಂದ ದೊಡ್ಡ ಅಪರಾಧ’ ಎಂದು ರಷ್ಯಾ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹಾಗೂ ಉಕ್ರೇನ್‌ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಮೇಲೆ ಪಾಶ್ಚಾತ್ಯ ದೇಶಗಳು ಇನ್ನಷ್ಟುಕಠಿಣ ನಿರ್ಬಂಧಗಳನ್ನು ಹೇರಬೇಕು. ಇದು ನರಮೇಧವಲ್ಲದೇ ಮತ್ತಿನ್ನೇನು ಎಂದು ಕಿಡಿಕಾರಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more