Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Published : Mar 11, 2022, 05:47 PM IST

ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಕೀವ್(ಮಾ.11): ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಮರಿಯುಪೋಲ್‌ ನಗರದ ಹೆರಿಗೆ ಆಸ್ಪತ್ರೆಯೊಂದರ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಇನ್ನೇನು ಹೆರಿಗೆಗೆ ಒಳಗಾಗುತ್ತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿವೆ. ಸ್ಫೋಟ ಎಷ್ಟುತೀವ್ರವಾಗಿತ್ತು ಎಂದರೆ ಅನೇಕ ಮೈಲಿ ದೂರದವರೆಗೆ ಶಬ್ದ ಕೇಳಿಸಿದೆ. ಅಕ್ಕಪಕ್ಕದ ಕಟ್ಟಡಗಳು ಸ್ಫೋಟದ ರಭಸಕ್ಕೆ ನಡುಗಿ ಹೋಗಿವೆ. ಇನ್ನು ಕೀವ್‌ ಸಮೀಪದ ಝೈತೋಮಿರ್‌ ಎಂಬ ನಗರದ 2 ಆಸ್ಪತ್ರೆಗಳ ಮೇಲೂ ರಷ್ಯಾ ಬಾಂಬ್‌ ಮಳೆಗರೆದಿದೆ. ಇದರಲ್ಲಿ ಒಂದು ಮಕ್ಕಳ ಆಸ್ಪತ್ರೆಯಾಗಿದೆ. ಸುದೈವವಶಾತ್‌ ಇಲ್ಲಿ ಸಾವು ನೋವು ಸಂಭವಿಸಿಲ್ಲ. ಮರಿಯುಪೋಲ್‌ ಆಸ್ಪತ್ರೆ ಮೇಲಿನ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದು ಮಾತ್ರ ಖಚಿತವಾಗಿದೆ.

ರಷ್ಯಾ ಈ ರೀತಿ ದಾಳಿ ನಡೆಸುತ್ತಿರುವುದಕ್ಕೆ ಉಕ್ರೇನ್‌ ತೀವ್ರ ಖಂಡನೆ ವ್ಯಕ್ತಪಡಿದೆ. ‘ಮಕ್ಕಳ ಆಸ್ಪತ್ರೆ ಮೇಲೂ ದಾಳಿ ನಡೆಸುವಷ್ಟುರಷ್ಯಾ ನಿಷ್ಕರುಣಿಯಾಗಿದೆ. ಇದೊಂದ ದೊಡ್ಡ ಅಪರಾಧ’ ಎಂದು ರಷ್ಯಾ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹಾಗೂ ಉಕ್ರೇನ್‌ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಮೇಲೆ ಪಾಶ್ಚಾತ್ಯ ದೇಶಗಳು ಇನ್ನಷ್ಟುಕಠಿಣ ನಿರ್ಬಂಧಗಳನ್ನು ಹೇರಬೇಕು. ಇದು ನರಮೇಧವಲ್ಲದೇ ಮತ್ತಿನ್ನೇನು ಎಂದು ಕಿಡಿಕಾರಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more